Select Your Language

Notifications

webdunia
webdunia
webdunia
webdunia

ಸಿಎಂ ಹೆಚ್‌‌.ಡಿ ಕುಮಾರಸ್ವಾಮಿಯವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ನಿರ್ಮಾಪಕಿ ಶಿಲ್ಪಾ ಗಣೇಶ್

ಸಿಎಂ ಹೆಚ್‌‌.ಡಿ ಕುಮಾರಸ್ವಾಮಿಯವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ನಿರ್ಮಾಪಕಿ ಶಿಲ್ಪಾ ಗಣೇಶ್
ಬೆಂಗಳೂರು , ಗುರುವಾರ, 24 ಮೇ 2018 (06:51 IST)
ಬೆಂಗಳೂರು : ರಾಜ್ಯದ ವಿಧಾನಸಭಾ ಚುನಾವಣೆಗೆ ಮೊದಲು ಸಿಎಂ ಹೆಚ್‌‌.ಡಿ ಕುಮಾರಸ್ವಾಮಿ ಅವರು ಒಂದು ವೇಳೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡುತ್ತೇನೆ ಎಂದು ಹೇಳಿಕೆ ನೀಡಿರುವುದಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ಅವರ ಪತ್ನಿ ನಿರ್ಮಾಪಕಿ ಶಿಲ್ಪಾ ಗಣೇಶ್ ಅವರು ಟ್ವೀಟರ್ ನ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಸಿಎಂ ಹೆಚ್‌‌.ಡಿ ಕುಮಾರಸ್ವಾಮಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿ,’ ನನಗೆ ಸ್ವತಂತ್ರ ಸರ್ಕಾರ ಕೊಟ್ಟಿದ್ರೆ 24 ಗಂಟೆಯಲ್ಲೇ ಸಾಲ ಮನ್ನಾ ಮಾಡುತ್ತಿದ್ದೆ. ಈಗ ಸಮ್ಮಿಶ್ರ ಸರ್ಕಾರ ರಚಿಸುತ್ತಿದ್ದೇವೆ. ಆ ಪಕ್ಷದವರನ್ನೂ ನಾನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಎರಡೂ ಪಕ್ಷಗಳೂ ಒಟ್ಟಿಗೆ ಹೋಗಬೇಕು. ಜನತೆಗೆ ಕೊಟ್ಟ ಮಾತನ್ನ ಉಳಿಸಿಕೊಳ್ಳಬೇಕು. ನಾನು ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುವಂತಿಲ್ಲ. ಜನ ಸ್ವಲ್ಪ ದಿನ ಕಾಯಬೇಕು’ ಎಂದು ಹೇಳಿದ್ದರು.


ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ನಿರ್ಮಾಪಕಿ ಶಿಲ್ಪಾ ಗಣೇಶ್ ಅವರು ಟ್ವೀಟರ್ ನಲ್ಲಿ,’ ಕುಮಾರಸ್ವಾಮಿಯವರೇ, ಈ ಸಲ ಹೇಗೋ ಕರ್ನಾಟಕದ ಜನತೆಯನ್ನು ತಮ್ಮ ಪ್ರಣಾಳಿಕೆಗಳ ಮೂಲಕ ಮೂರ್ಖರನ್ನಾಗಿಸಿದ್ದೀರಿ. ಆದರೆ, ಇನ್ನು ಮುಂದೆ ಪ್ರಣಾಳಿಕೆಯ ಪ್ರತಿ ಅಂಶದ ಕೆಳಗೆ ಷರತ್ತುಗಳು ಅನ್ವಯಿಸುತ್ತದೆ ಎಂದು ಸೇರಿಸುವುದು ಉತ್ತಮ" ಎಂದುಟೀಕೆ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ರವರಿಗೆ ಕರೆ ಮಾಡಿ ಶುಭಾಶಯ ಕೋರಿದ ಪ್ರಧಾನಮಂತ್ರಿ ನರೇಂದ್ರ ಮೋದಿ