Webdunia - Bharat's app for daily news and videos

Install App

ಕೊಡಗಿನಲ್ಲಿ ಮದ್ಯ ಮಾರಾಟ ನಿಷೇಧ!?

Webdunia
ಗುರುವಾರ, 25 ಆಗಸ್ಟ್ 2022 (08:08 IST)
ಮಡಿಕೇರಿ : ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿ ರಾಜಕೀಯ ಮೇಲಾಟ, ಕಿತ್ತಾಟದ ನಡುವೆ ಕೊಡಗಿನಲ್ಲಿ ನಾಳೆಯಿಂದ ಶನಿವಾರದವರೆಗೆ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿದೆ.

ಕೊಡಗಿಗೆ ಆಗಮಿಸಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆತ ಪ್ರಕರಣವು ದಿನಕ್ಕೊಂದು ತಿರುವು ಪಡೆಯುತ್ತಿದೆ.

ಬಿಜೆಪಿ ಹಾಗೂ ಕಾಂಗ್ರೆಸ್ ಆರೋಪ ಪ್ರತ್ಯಾರೋಪಗಳನ್ನು ಮಾಡಿಕೊಳ್ಳುತ್ತಿದ್ದು, 2 ಪಕ್ಷಗಳು ಪ್ರತಿಭಟನೆಯನ್ನು ಮಾಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ನಾಳೆಯಿಂದ ಆ.27ರವರೆಗೆ ನಿಷೇಧಾಜ್ಞೆಯನ್ನು ಜಿಲ್ಲಾಡಳಿತ ಜಾರಿಗೊಳಿಸಿದ್ದು, ಈ 4 ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಿದೆ.

ಘಟನೆಗೆ ಪೊಲೀಸ್ ಇಲಾಖೆ ವೈಫಲ್ಯ ಎಂದು ಆರೋಪಿಸಿ ಇದೇ 26ರಂದು ಕಾಂಗ್ರೆಸ್ ಪಕ್ಷದಿಂದ ಮಡಿಕೇರಿ ಚಲೋವನ್ನು ಹಮ್ಮಿಕೊಂಡಿತ್ತು. ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಿರ್ಧರಿಸಿತ್ತು. 

ಇದೆಲ್ಲಾ ರಾಜಕೀಯ ಮೇಲಾಟ ಕಿತ್ತಾಟದ ನಡುವೆ ಇದೀಗ ಕೊಡಗು ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿದೆ. 4 ದಿನಗಳ ಕಾಲ 144 ಸೆಕ್ಷನ್ ಹಾಕಲಾಗಿದ್ದು, ಎರಡು ಪಕ್ಷದವರಿಗೂ ಸಮಾವೇಶ ಹಾಗೂ ಪ್ರತಿಭಟನೆ ಮಾಡುವುದನ್ನು ನಿರ್ಬಂಧ ಮಾಡಲಾಗಿದೆ. ನಾಳೆಯಿಂದ ಆ. 27ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ ಎಂದು ಜಿಲ್ಲಾಧಿಕಾರಿ ಸತೀಶ್ ಖಡಕ್ ಆದೇಶ ಕೊಟ್ಟಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

ಮುಂದಿನ ಸುದ್ದಿ
Show comments