Select Your Language

Notifications

webdunia
webdunia
webdunia
webdunia

ಮತಾಂತರ ನಿಷೇಧ ಕಾಯ್ದೆಗೆ ರಾಜ್ಯಪಾಲರಿಂದ ಅಂಕಿತ

ಮತಾಂತರ ನಿಷೇಧ ಕಾಯ್ದೆಗೆ ರಾಜ್ಯಪಾಲರಿಂದ ಅಂಕಿತ
ಬೆಂಗಳೂರು , ಶನಿವಾರ, 1 ಅಕ್ಟೋಬರ್ 2022 (08:00 IST)
ಬೆಂಗಳೂರು : ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ  ಅನುಷ್ಠಾನಗೊಳಿಸಲು, ಮತಾಂತರ ನಿಷೇಧ ಮಸೂದೆಗೆ ರಾಜ್ಯಪಾಲರು ಇಂದು ಅಂಕಿತ ಹಾಕಿದ್ದಾರೆ.

ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದ ವಿಧೇಯಕಕ್ಕೆ ಇಂದು ರಾಜ್ಯಪಾಲರಾದ ಥಾವರ್ ಚಂದ್ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಈ ಮೂಲಕ ಬಲವಂತದ ಮತಾಂತರ ನಿಷೇಧಕ್ಕೆ ಇಂದಿನಿಂದ ಕಾಯಿದೆ ರೂಪ ನೀಡಲಾಗಿದೆ. 

ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ರಕ್ಷಣೆಗಾಗಿ, ತಪ್ಪು ನಿರೂಪಣೆ, ಬಲವಂತ ಹಾಗೂ ಇತರ ಯಾವುದೇ ವಂಚನೆ ವಿಧಾನಗಳ ಮೂಲಕ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಕಾನೂನು ಬಾಹಿರವಾಗಿ ಮತಾಂತರ ಮಾಡುವುದನ್ನು ತಡೆಯಲು ಈ ನಿಯಮ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ವಿಧೇಯಕದಲ್ಲಿ ಹೇಳಲಾಗಿದೆ. 


Share this Story:

Follow Webdunia kannada

ಮುಂದಿನ ಸುದ್ದಿ

ಪ್ರೀತಿಸಿದವಳಿಂದ ಅವಮಾನ ಎಂದು ಪ್ರಿಯಕರ ಆತ್ಮಹತ್ಯೆ!?