Select Your Language

Notifications

webdunia
webdunia
webdunia
webdunia

ರೆಸಾರ್ಟ್ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ

ರೆಸಾರ್ಟ್ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ
ಬೆಂಗಳೂರು , ಮಂಗಳವಾರ, 13 ಡಿಸೆಂಬರ್ 2022 (07:20 IST)
ಬೆಂಗಳೂರು : ಭಾರತದ ಅಧ್ಯಕ್ಷತೆಯಲ್ಲಿ ಒಂದು ನೆಲ ಒಂದು ಕುಟುಂಬ, ಒಂದು ಭವಿಷ್ಯ ಎಂಬ ಪರಿಕಲ್ಪನೆಯ ಅಡಿಯಲ್ಲಿ ಮಂಗಳವಾರದಿಂದ ಬೆಂಗಳೂರಿನಲ್ಲಿ ಜಿ 20 ಶೃಂಗಸಭೆ ಆರಂಭವಾಗಲಿದೆ.

ಬೆಂಗಳೂರು ಹೊರವಲಯದಲ್ಲಿರುವ ದೇವನಹಳ್ಳಿಯ ಪ್ರೆಸ್ಟಿಜ್ ಗಾಲ್ಪ್ ಶೈರ್ ಜೆಡಬ್ಯ್ಲೂ ಮ್ಯಾರಿಯಟ್ ಹೋಟೆಲ್ನಲ್ಲಿ ಶೃಂಗಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ.

ಮೂರು ದಿನಗಳ ಕಾಲ ಜಾಗತಿಕ ಮಟ್ಟದ ಸವಾಲುಗಳು, ಅಂತರಾಷ್ಟ್ರೀಯ ಮಟ್ಟದ ಹಣಕಾಸು ಪುನರುಜ್ಜೀವನಗೊಳಿಸುವ ಬಗ್ಗೆ ಚರ್ಚೆಗಳು ನಡೆಯಲಿವೆ. ಯುರೋಪಿಯನ್ ಯೂನಿಯನ್ ದೇಶಗಳಿಂದ ಗಣ್ಯರು ಇಂದು ಆಗಮಿಸುತ್ತಿದ್ದಾರೆ.

ಹಲವು ದೇಶಗಳ ಹಣಕಾಸು ಕಾರ್ಯದರ್ಶಿ ಗಳು ಸೇರಿದಂತೆ ಹಲವು ಗಣ್ಯರು ಜಿ20 ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಡಿ.17 ರವರೆಗೂ 2 ಸಭೆಗಳು ಹೋಟೆಲ್ನಲ್ಲಿ ನಡೆಯಲಿವೆ.  

ಈ ಶೃಂಗಸಭೆಗೆ ಆಗಮಿಸುವ ಅತಿಥಿಗಳ ಭದ್ರತೆಗೆ 6 ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ. ಸುಮಾರು 700 ಮಂದಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಕೇಂದ್ರ ಹಣಕಾಸು ಹಾಗೂ ಬ್ಯಾಂಕ್ಗಳ ಪ್ರತಿನಿಧಿಗಳ ಸಭೆ ನಡೆಯಲಿದ್ದು, ಡಿ.16 ಹಾಗೂ 17 ರಂದು ನಿಯಾಮವಳಿ ರೂಪಿಸುವ ಕಾರ್ಯಕಾರಿ ಸಭೆ ನಡೆಯಲಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ವಿವಿ ಪುರಂ ನ ಫುಡ್ ಸ್ಟ್ರೀಟ್ ಗೆ ಹೊಸ ಟಚ್ ಕೊಡಲು ಬಿಬಿಎಂಪಿ ಪ್ಲಾನ್