Webdunia - Bharat's app for daily news and videos

Install App

ವೇಶ್ಯಾವಾಟಿಕೆ ಅಪರಾಧವಲ್ಲ, ವೃತ್ತಿ: ಸುಪ್ರೀಂ ಕೋರ್ಟ್

Webdunia
ಗುರುವಾರ, 26 ಮೇ 2022 (15:00 IST)
ನವದೆಹಲಿ : ವೇಶ್ಯಾವಾಟಿಕೆ ಪರ ಮತ್ತು ವಿರೋಧದ ಚರ್ಚೆಗಳು ದಶಕಗಳಿಂದ ಕೇಳಿ ಬರುತ್ತಿವೆ.

ವೇಶ್ಯಾವಾಟಿಕೆಯನ್ನು ಕಾನೂನುಬದ್ಧ ಗೊಳಿಸಬೇಕು ಮತ್ತು ಅದರಲ್ಲಿ ತೊಡಗಿಕೊಂಡ ಮಹಿಳೆಯರನ್ನು ಸಮಾಜದಲ್ಲಿ ಗೌರವಯುತವಾಗಿ ನಡೆಸಿಕೊಳ್ಳಬೇಕು ಎಂಬ ವಾದ ಈ ಹಿಂದಿನಿಂದಲೂ ಕೇಳಿ ಬಂದಿತ್ತು.

ಈ ಸಂಬಂಧ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಇನ್ನು ಮುಂದೆ ವೇಶ್ಯಾವಾಟಿಕೆ ಕಾನೂನು ಬದ್ಧ ಎಂಬ ತೀರ್ಪು ನೀಡಿದೆ. ಜತೆಗೆ ಪೊಲೀಸರು ವೇಶ್ಯಾವಾಟಿಕೆ ಸಂಬಂಧ ಮಧ್ಯಪ್ರವೇಶಿಸುವಂತಿಲ್ಲ, ಅವರ ಮೇಲೆ ಕ್ರಮ ಕೈಗೊಂಡರೆ ಪೊಲೀಸರ ವಿರುದ್ಧವೇ ಕ್ರಿಮಿನಲ್ ಮೊಖದ್ದಮೆ ಹೂಡುವುದಾಗಿ ಎಚ್ಚರಿಕೆ ನೀಡಿದೆ.

ಸುಪ್ರೀಂ ಕೋರ್ಟಿನ ತ್ರಿಸದಸ್ಯ ಪೀಠ ಈ ಮಹತ್ವದ ಆದೇಶವನ್ನು ಹೊರಡಿಸಿದೆ. ನ್ಯಾಯಮೂರ್ತಿ ಎಲ್ ನಾಗೇಶ್ವರ ರಾವ್ ಅವರ ಅಧ್ಯಕ್ಷತೆಯ ಪೀಠ ಇಂದು ಆದೇಶ ನೀಡಿದೆ. ವೇಶ್ಯಾವಾಟಿಕೆಯಲ್ಲಿ ತೊಡಗಿದ ಮಹಿಳೆಯರ ಹಕ್ಕುಗಳ ರಕ್ಷಣೆ ಕುರಿತಂತೆ ಆರು ನಿರ್ದೇಶನಗಳನ್ನು ಕೋರ್ಟ್ ನೀಡಿದೆ.

 "ವೇಶ್ಯಾವಾಟಿಕೆಯಲ್ಲಿ ಭಾಗಿಯಾದ ಮಹಿಳೆಯರಿಗೆ ಸಮಾಜದ ಪ್ರತಿಯೊಬ್ಬರಿಗೂ ಸಿಗಬೇಕಾದ ರಕ್ಷಣೆಯ ಹಕ್ಕಿದೆ. ಕ್ರಿಮಿನಲ್ ಮೊಕದ್ದಮೆ ಹೂಡುವಾಗ ಅವರ ವಯಸ್ಸು ಮತ್ತು ಅವರು ಸ್ವ ಇಚ್ಚೆಯಿಂದ ಭಾಗಿಯಾಗಿದ್ದಾರ ಎಂಬ ಬಗ್ಗೆ ತಿಳಿದುಕೊಳ್ಳಬೇಕು.

ಒಂದು ವೇಳೇ ಸ್ವಂತ ನಿರ್ಧಾರದ ಮೇಲೆ ವೇಶ್ಯಾವಾಟಿಕೆಯಲ್ಲಿ ಭಾಗಿಯಾಗಿದ್ದರೆ ಅವರ ವಿರುದ್ಧ ಕಾನೂನು ಕ್ರಮ ಅಥವಾ ಕ್ರಿಮಿನಲ್ ಮೊಕದ್ದಮೆ ಹೂಡುವ ಹಕ್ಕು ಪೊಲೀಸರಿಗಿಲ್ಲ. ಅನಗತ್ಯ ಮಧ್ಯಪ್ರವೇಶ ಮಾಡುವುದನ್ನು ಕೋರ್ಟ್ ಸಹಿಸುವುದಿಲ್ಲ. ವೇಶ್ಯಾವಾಟಿಕೆಯೂ ಒಂದು ವೃತ್ತಿ. ದೇಶದ ಪ್ರತಿ ನಾಗರಿಕನಿಗೆ ಸಿಗುವ ರಕ್ಷಣೆ, ಹಕ್ಕು ಮತ್ತು ಗೌರವ ಈ ಮಹಿಳೆಯರಿಗೂ ದೊರೆಯಬೇಕು," ಎಂದು ಸುಪ್ರೀಂ ಕೋರ್ಟ್ ಪೀಠ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

ಮುಂದಿನ ಸುದ್ದಿ
Show comments