Webdunia - Bharat's app for daily news and videos

Install App

ನಾಳೆ ಸಂಜೆ ಪಿಯು ಫಲಿತಾಂಶ ಪ್ರಕಟ; ರಿಸಲ್ಟ್ ನೋಡಲು ಹೀಗೆ ಮಾಡಿ...!

Webdunia
ಸೋಮವಾರ, 19 ಜುಲೈ 2021 (13:23 IST)
ಬೆಂಗಳೂರು(ಜು.19): ಕೊರೋನಾ ಕಾರಣದಿಂದಾಗಿ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೆ ಪಾಸ್ ಮಾಡಿದ್ದ ಶಿಕ್ಷಣ ಇಲಾಖೆ, ನಾಳೆ ಫಲಿತಾಂಶ ಪ್ರಕಟ ಮಾಡಲಿದೆ. ಜು.20ರ ಸಂಜೆ 4.30ಕ್ಕೆ ದ್ವಿತೀಯ ಪಿಯು ರಿಸಲ್ಟ್ ರಿಲೀಸ್ ಆಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಬಾರಿ  ಗ್ರೇಡ್ ಬದಲಿಗೆ ಅಂಕಗಳ ಆಧಾರದ ಮೇಲೆ ಫಲಿತಾಂಶ ಹೊರಬೀಳಲಿದೆ.

ಅಂಕ ಕೊಡಲು ಎಸ್ಎಸ್ಎಲ್ಸಿ ಮತ್ತು ಪ್ರಥಮ ಪಿಯುಸಿ ಮಾರ್ಕ್ಸ್ನ್ನೂ ಗಣನೆಗೆ ತೆಗೆದುಕೊಳ್ಳುವುದಾಗಿ ಹೇಳಿತ್ತು. ಅಂತೆಯೇ ಈಗ ಪಿಯುಸಿ ಫಲಿತಾಂಶ ಪ್ರಕಟ ಮಾಡಲು ಮುಹೂರ್ತ ಫಿಕ್ಸ್ ಆಗಿದೆ.
ಎಸ್ಎಸ್ಎಲ್ಸಿ ಮೊದಲ ಪರೀಕ್ಷೆಯ ಮರುದಿನವೇ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ಇಂದು 10ನೇ ತರಗತಿ ಮೊದಲ ಪರೀಕ್ಷೆ ನಡೆಯುತ್ತಿದೆ. ನಾಳೆ ಅಂದರೆ ಜು.20ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ.
ಈ ಬಾರಿ ಯಾವುದೇ ರ್ಯಾಂಕ್ ಇರುವುದಿಲ್ಲ. ಸಿಬಿಎಸ್ಇ ಮಾದರಿಯಲ್ಲಿ ಎಸ್ಎಸ್ಎಲ್ಸಿ, ಪ್ರಥಮ ಪಿಯು ಅಂಕಗಳನ್ನು ಪರಿಗಣಿಸಿ ಫಲಿತಾಂಶ ನೀಡಲಾಗುತ್ತದೆ. ಗ್ರೇಡ್ ಬದಲು ಅಂಕಗಳ ಆಧಾರದಲ್ಲಿ ದ್ವಿತೀಯ ಪಿಯು ಫಲಿತಾಂಶವನ್ನು ಕೊಡಲಾಗುತ್ತದೆ.
ಯಾವುದೇ ಗೊಂದಲಗಳಾಗದಂತೆ ಫಲಿತಾಂಶ ನೀಡಲು ಶಿಕ್ಷಣ ಇಲಾಖೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ. ಪರೀಕ್ಷೆ ಇಲ್ಲದೇ ಫಲಿತಾಂಶ ಪ್ರಕಟಕ್ಕೆ ಪಿಯು ಬೋರ್ಡ್ ಸಿದ್ದತೆ ಮಾಡಿಕೊಂಡಿದೆ. ಆದರೆ ಇನ್ನೂ ಸಹ ಫಲಿತಾಂಶ ಹೇಗೆ ನೀಡಬೇಕು ಎಂಬ ಗೊಂದಲ ಬಗೆಹರಿದಿಲ್ಲ. ದೊಡ್ಡ ಸವಾಲೊಂದು ಪಿಯು ಬೋರ್ಡ್ ಮುಂದಿದೆ. ಹಾಗಿದ್ರೆ ಪಿಯು ಬೋರ್ಡ್ ಮುಂದಿರುವ ಆ ದೊಡ್ಡ ಸವಾಲು ಯಾವುದು ಅಂತೀರಾ? ಪ್ರತೀ ವರುಷ ಪರೀಕ್ಷೆಗೆ ಕೊಟ್ಟ ರಿಜಿಸ್ಟರ್ ನಂಬರ್ ಮೇಲೆ ಫಲಿತಾಂಶ ಸಿಗುತ್ತಿತ್ತು. ಅಂದರೆ ಪಿಯು ಬೋರ್ಡ್ ವೆಬ್ಸೈಟ್ಗೆ ಹೋಗಿ ವಿದ್ಯಾರ್ಥಿಯ ರಿಜಿಸ್ಟರ್ ನಂಬರ್ ಹಾಕಿದರೆ ಆಗ ಫಲಿತಾಂಶ ಸಿಗುತ್ತಿತ್ತು. ಆದರೆ ಈ ಬಾರಿ ಪರೀಕ್ಷೆಯೇ ನಡೆಸಿಲ್ಲವಾದ್ದರಿಂದ ರಿಜಿಸ್ಟರ್ ನಂಬರ್ ಸಿಕ್ಕಿಲ್ಲ.
ಫಲಿತಾಂಶದ ಸಲುವಾಗಿ ವಿದ್ಯಾರ್ಥಿಗಳಿಗೆ ಹೊಸದಾಗಿ ರಿಜಿಸ್ಟರ್ ನಂಬರ್ ಜನರೇಟ್ ಮಾಡಲು ಪಿಯು ಬೋರ್ಡ್ ವ್ಯವಸ್ಥೆ ಮಾಡಿದೆ. ಅದರಂತೆ ಬೋರ್ಡ್ ನೀಡಿದ ರಿಜಿಸ್ಟರ್ ನಂಬರ್(ಏಟಿoತಿ mಥಿ ಟಿumbeಡಿ)ನ್ನು ಪಿಯು ವೆಬ್ ಸೈಟ್ನಲ್ಲಿ ಹಾಕಿ ಆ ಮೂಲಕ ವಿದ್ಯಾರ್ಥಿಗಳು ಪರಿಶೀಲಿಸಬಹುದು. ವಿದ್ಯಾರ್ಥಿಗಳಿಗೆ ಎಸ್ ಎಂ ಎಸ್ ಹಾಗೂ ಆಯಾ ಕಾಲೇಜಿಗೆ ಈ ಕುರಿತು ಫಲಿತಾಂಶದ ಮಾಹಿತಿ ನೀಡಲಾಗುತ್ತದೆ.
ಫಲಿತಾಂಶಕ್ಕೂ ಮುನ್ನ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ನ್ನು ಐಡೆಂಟಿಫೈ ಮಾಡಿಕೊಳ್ಳಬೇಕು. ಜನರೇಟ್ ಆದ ರಿಜಿಸ್ಟರ್ ನಂಬರ್ ಚೆಕ್ ಮಾಡಿ ಖಚಿತಪಡಿಸಿಕೊಳ್ಳಬೇಕು. ಆನಂತರ ಜು.20ರಂದು ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗುತ್ತದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರು ಯಾಕೆ ಚಿಕ್ಕ ವಯಸ್ಸಿನ ಹುಡುಗನ ಕಡೆಗೆ ಆಕರ್ಷಿತರಾಗುತ್ತಾರೆ

Raja Raguvamshi murder: ಗಂಡನನ್ನು ಕೊಲೆ ಬಗ್ಗೆ ಶಾಕಿಂಗ್ ವಿಚಾರ ಬಾಯ್ಬಿಟ್ಟ ಸೋನಮ್: ತಂದೆ ಫುಲ್ ಸಪೋರ್ಟ್

Siddaramaiah: ಚಿನ್ನಸ್ವಾಮಿ ದುರಂತದ ಬಗ್ಗೆ ಜೊತೆಯಲ್ಲಿದ್ದವರೂ ಹೇಳಲೇ ಇಲ್ವಲ್ಲಪ್ಪಾ.. ಸಿದ್ದರಾಮಯ್ಯ ಅಳಲು

Kerala cargo Ship fire: ಬೇಪೂರ್ ಹಡಗು ಅಗ್ನಿ ದುರಂತ 18 ಮಂದಿ ರಕ್ಷಣೆ video

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

ಮುಂದಿನ ಸುದ್ದಿ
Show comments