Webdunia - Bharat's app for daily news and videos

Install App

ಫಲಿತಾಂಶ ಪ್ರಕಟ : ರಿಸಲ್ಟ್ ವೀಕ್ಷಿಸುವುದು ಹೇಗೆ ತಿಳಿಯಿರಿ

Webdunia
ಗುರುವಾರ, 19 ಮೇ 2022 (10:25 IST)
ಬೆಂಗಳೂರು : ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ರಾಜ್ಯದಲ್ಲಿ ಶೇ.85.63 ರಷ್ಟು ಫಲಿತಾಂಶ ಪ್ರಕಟವಾಗಿದೆ.

10 ವರ್ಷಗಳಲ್ಲೇ ಇದು ದಾಖಲೆ ಫಲಿತಾಂಶವಾಗಿದೆ. ಶೇ. 81.03 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ ಶೇ.90.29 ವಿದ್ಯಾರ್ಥಿನಿಯರು ಪಾಸ್ ಆಗಿದ್ದಾರೆ. 145 ವಿದ್ಯಾರ್ಥಿಗಳು 625 ಅಂಕ ಪಡೆದಿರುವುದು ವಿಶೇಷ. ಸರ್ಕಾರಿ ಶಾಲೆಯ 21, ಅನುದಾನಿತ ಶಾಲೆಯ 8, ಖಾಸಗಿ ಶಾಲೆಯ 116 ವಿದ್ಯಾರ್ಥಿಗಳು 625 ಅಂಕ ಪಡೆದಿದ್ದಾರೆ.

ಶಿಕ್ಷಣ ಸಚಿವ ನಾಗೇಶ್ ಅವರು ಮಧ್ಯಾಹ್ನ 12:30ಕ್ಕೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟಿಸಿದರು. ಎಂದಿನಂತೆ ಗ್ರಾಮೀಣ ವಿದ್ಯಾರ್ಥಿಗಳೇ ಉತ್ತಮ ಸಾಧನೆ ಮಾಡಿದ್ದಾರೆ. ನಗರ ಭಾಗದಲ್ಲಿ ಶೇ.86.64 ಫಲಿತಾಂಶ ದಾಖಲಾದರೆ ಗ್ರಾಮೀಣ ಭಾಗದಲ್ಲಿ ಶೇ.91.32 ರಷ್ಟು ಫಲಿತಾಂಶ ಪ್ರಕಟವಾಗಿದೆ.
20 ಶಾಲೆಗಳು ಶೂನ್ಯ ಸಂಪಾದನೆ ಮಾಡಿದರೆ 3,920 ಶಾಲೆಗಳು ಶೇ.100 ರಷ್ಟು ಫಲಿತಾಂಶ ದಾಖಲಿಸಿದೆ.

ಫಲಿತಾಂಶ ವೀಕ್ಷಣೆ ಹೇಗೆ?

ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್ಸೈಟ್ ಞಚಿಡಿಡಿesuಟಣs.ಟಿiಛಿ.iಟಿ ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್ಗಳಿಗೆ SಒS ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ.

ಮಾರ್ಚ್ 28 ರಿಂದ ಏಪ್ರಿಲ್ 11ರ ವರಗೆ 2022ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ನಡೆದಿತ್ತು. ಈ ಬಾರಿ ಮುಖ್ಯ ಪರೀಕ್ಷೆಗೆ 15,387 ಶಾಲೆಗಳಿಂದ 8,73,884 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 4,52,732 ವಿದ್ಯಾರ್ಥಿಗಳು, 4,21,110 ವಿದ್ಯಾರ್ಥಿನಿಯರು ಮತ್ತು 4 ತೃತೀಯ ಲಿಂಗಿ ವಿದ್ಯಾರ್ಥಿಗಳು. ವಿಭಿನ್ನ ಸಾಮರ್ಥ್ಯವುಳ್ಳ 5,307 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments