Webdunia - Bharat's app for daily news and videos

Install App

‘ನಮ್ಮ ದೃಷ್ಟಿ ನಮ್ಮ ಕರ್ನಾಟಕ’ ಕ್ಕೆ ಪುನೀತ್ ರಾಯಭಾರಿ

Webdunia
ಬುಧವಾರ, 30 ಮಾರ್ಚ್ 2022 (13:31 IST)
ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದರು ನಟ ಪುನೀತ್ ರಾಜ್ ಕುಮಾರ್.
 
ಈ ಮೂಲಕ ಲಕ್ಷಾಂತರ ಜನರಿಗೆ ಪ್ರೇರಣೆಯೂ ಆಗಿದ್ದರು. ಹಾಗಾಗಿ ಪುನೀತ್ ರಾಜ್ ಕುಮಾರ್ ಅವರನ್ನು ‘ನಮ್ಮ ದೃಷ್ಟಿ ನಮ್ಮ ಕರ್ನಾಟಕ’ ಅರಿವು ಅಭಿಯಾನದ ರಾಯಭಾರಿಯನ್ನಾಗಿ ಮಾಡಲಾಗಿದೆ. ಮಂಗಳವಾರವಷ್ಟೇ ಈ ವಿಷಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದ್ದಾರೆ.

ಆರೋಗ್ಯ ಇಲಾಖೆ, ಡಾ.ರಾಜ್ ಕುಮಾರ್ ಟ್ರಸ್ಟ್ ಮತ್ತು ಎಸ್ಸಿರ್ಲಾ ವಿಷನ್ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಿಎಂ ಬಸವರಾಜ್ ಬೊಮ್ಮಾಯಿ, ‘ನಮ್ಮ ದೃಷ್ಟಿ ನಮ್ಮ ಕರ್ನಾಟಕ’ ಅಭಿಯಾನಕ್ಕೆ ಚಾಲನೆ ನೀಡಿದರು. 

ಈ ಕಾರ್ಯಕ್ರಮದಲ್ಲಿ ಪುನೀತ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಕೂಡ ಭಾಗಿಯಾಗಿದ್ದರು. ಈ ಅಭಿಯಾನದ ಕುರಿತು ಸುದೀರ್ಘ ಟ್ವಿಟ್ ಮಾಡಿರುವ ಅಶ್ವಿನಿ, ‘ಇದು ಡಾ|| ಪುನೀತ್ ಅವರ ಸಾಮಾಜಿಕ ಕಳಕಳಿ, ಅವಕಾಶ ವಂಚಿತರಿಗೆ ದೃಷ್ಟಿಯನ್ನು ಕಲ್ಪಿಸುವ ಸಲುವಾಗಿ ಇದ್ದ ಬದ್ಧತೆ,

ದೂರದೃಷ್ಠಿತ ಹಾಗೂ ನಿಷ್ಠೆಗೆ ನಾವು ಸಲ್ಲಿಸುವ ಭಾವಪೂರ್ಣ ಗೌರವ. ಡಾ|| ರಾಜ್ಕುಮಾರ್ ಟ್ರಸ್ಟ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಎಸ್ಸಿಲಾರ್ ವಿಷನ್ ಪ್ರತಿಷ್ಠಾನ ಇವರ ಸಹಭಾಗಿತ್ವದಲ್ಲಿ ‘ನಮ್ಮ ದೃಷ್ಟಿ – ನಮ್ಮ ಕರ್ನಾಟಕ’ ಅರಿವು ಅಭಿಯಾನವನ್ನು ನೆನ್ನೆ ಕಾರ್ಯಾರಂಭ ಮಾಡಲಾಯಿತು’ ಎಂದು ಬರೆದುಕೊಂಡಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments