Webdunia - Bharat's app for daily news and videos

Install App

ಅಪಘಾತಕ್ಕೀಡಾದ ನಟ ಪುನೀತ್ ರಾಜ್ ಕುಮಾರ್ ಕಾರು

Webdunia
ಶುಕ್ರವಾರ, 8 ಜೂನ್ 2018 (09:32 IST)
ಬೆಂಗಳೂರು: ಸ್ಯಾಂಡಲ್ ವುಡ್ ದೊಡ್ಮನೆ ಹುಡುಗ ನಟ, ಪುನೀತ್ ರಾಜ್ ಕುಮಾರ್ ಚಲಿಸುತ್ತಿದ್ದ ಕಾರು ಆಂಧ್ರಪ್ರದೇಶದ ಅನಂತಪುರಂ ಜಿಲ್ಲೆ ಬಳಿ ಅಪಘಾತಕ್ಕೀಡಾಗಿದೆ.

ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಸುದ್ದಿ ತಿಳಿದ ತಕ್ಷಣ ಅವರ ಮನೆ ಬಳಿ ಅಭಿಮಾನಿಗಳ ದಂಡೇ ಮೆರೆದಿತ್ತು. ತಮ್ಮ ಮೆಚ್ಚಿನ ನಟನಿಗೆ ಏನಾಯಿತೋ ಎಂಬ ಆತಂಕದಿಂದ ಅಭಿಮಾನಿಗಳು ಮನೆವರೆಗೆ ಬಂದಿದ್ದಲ್ಲದೆ, ಸಾಮಾಜಿಕ ಜಾಲತಾಣದಲ್ಲೂ  ಆತಂಕ ವ್ಯಕ್ತಪಡಿಸುತ್ತಿದ್ದರು.

ಆದರೆ ಕಾರಿಗೆ ಸ್ವಲ್ಪ ಪೆಟ್ಟಾಗಿರುವುದಲ್ಲದೆ, ಕಾರಿನಲ್ಲಿದ್ದ ನಮಗೆ ಯಾರಿಗೂ ಏನೂ ಆಗಿಲ್ಲ ಎಂದು ಸ್ವತಃ ಪುನೀತ್ ಮಾಧ್ಯಮಗಳ ಮೂಲಕ ಅಭಿಮಾನಿಗಳಿಗೆ ಹೇಳಿಕೆ ನೀಡಿದರು. ಅಲ್ಲದೆ, ಅಪಘಾತವಾದಾಗ ಸ್ಥಳೀಯರು ತಮಗೆ ಸಹಾಯ ಮಾಡಿದರು. ನಾವೆಲ್ಲರೂ ಚೆನ್ನಾಗಿಯೇ ಇದ್ದೇವೆ. ಅಭಿಮಾನಿಗಳು ಆತಂಕ ಪಡಬೇಕಾಗಿಲ್ಲ. ನನ್ನ ಮೇಲಿನ ಕಳಕಳಿಗೆ ಧನ್ಯವಾದಗಳು ಎಂದು ಪುನೀತ್ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments