Webdunia - Bharat's app for daily news and videos

Install App

ಕೊಡಗಿನ ಸುಂಟಿಕೊಪ್ಪ ಬಗ್ಗೆ ರಾಹುಲ್ ಗಾಂಧಿ ಟ್ವಿಟರ್ ನಲ್ಲಿ ಹೊಗಳಿದ್ದೇಕೆ ಗೊತ್ತಾ?

Webdunia
ಬುಧವಾರ, 22 ಆಗಸ್ಟ್ 2018 (09:04 IST)
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರವಾಹ ಪೀಡಿತ ಕೊಡಗಿನ ಬಗ್ಗೆ ಪ್ರಸ್ತಾಪಿಸುತ್ತಾ ಇಲ್ಲಿನ ಸುಂಟಿಕೊಪ್ಪದ ಬಗ್ಗೆ ವಿಶೇಷವಾಗಿ ಅಭಿನಂದಿಸಿದ್ದಾರೆ.

ಇದಕ್ಕೆ ಕಾರಣವೇನು ಗೊತ್ತಾ? ಪ್ರವಾಹದಿಂದ ತತ್ತರಿಸಿರುವ ಕೊಡಗಿನಲ್ಲಿ ಹಲವರು ನೆಲೆ ಕಳೆದುಕೊಂಡು ಸಂಕಷ್ಟಕ್ಕೀಡಾಗಿದ್ದಾರೆ. ಆ ಸಂಕಷ್ಟದ ಸಮಯದಲ್ಲೂ ಸುಂಟಿಕೊಪ್ಪದಲ್ಲಿ ಜಾತಿ ಮತ ಮರೆತು ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಬೌದ್ಧ ಧರ್ಮೀಯರು ಜತೆಯಾಗಿ ತಮ್ಮ ಮಠ ಮಂದಿರಗಳಲ್ಲಿ ಸಂತ್ರಸ್ತರಿಗೆ ಉಳಕೊಳ್ಳಲು ವ್ಯವಸ್ಥೆ ಮಾಡಿದ್ದನ್ನು ರಾಹುಲ್ ಟ್ವಿಟರ್ ನಲ್ಲಿ ಅಭಿನಂದಿಸಿದ್ದಾರೆ.

‘ಪ್ರವಾಹ ಪೀಡಿತ ಕೊಡಗಿನಲ್ಲಿ ಹಲವರು ತಮ್ಮ ಮನೆ ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ. ಆದರೆ ಈ ಸಂಕಷ್ಟದಲ್ಲೂ ಮರುಭೂಮಿಯ ಓಯಸಿಸ್ ನಂತೆ ಶಿವ, ರಾಮ, ಕ್ರಿಸ್ಟ್, ಅಲ್ಲಾಹ್ ಮತ್ತು ಬುದ್ಧ ಜತೆಯಾಗಿ ಸಂಕಷ್ಟಕ್ಕೀಡಾದವರಿಗೆ ನೆರವಾಗುತ್ತಿದ್ದಾರೆ. ಇದು ಭಾರತ ಅಂದರೆ’ ಎಂದು ರಾಹುಲ್ ಟ್ವೀಟ್ ಜತೆಗೆ ಅಲ್ಲಿನ ವಿಡಿಯೋವನ್ನೂ ಪ್ರಕಟಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments