Webdunia - Bharat's app for daily news and videos

Install App

ಸೆಪ್ಟೆಂಬರ್ 24ರ ತನಕ ಕರ್ನಾಟಕದಲ್ಲಿ ಮಳೆ ಮುನ್ಸೂಚನೆ

Webdunia
ಮಂಗಳವಾರ, 21 ಸೆಪ್ಟಂಬರ್ 2021 (10:33 IST)
ಬೆಂಗಳೂರು, ಸೆ 21 : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮಳೆ ಆರಂಭವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 24ರ ತನಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಳೆ ಬಿರುಸಾಗುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಸೋಮವಾರ ಮಧ್ಯಾಹ್ನ, ಸಂಜೆಯೂ ಮಳೆಯಾಗಿದ್ದು, ಇಂದು ಸಹ ಮಳೆ ಮುಂದುವರೆಯಲಿದೆ.
ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ಮಂಗಳವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಸನ, ಕೊಡಗು, ಮೈಸೂರು, ರಾಮನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆ ಸುರಿಯಲಿದೆ.
ಸೆಪ್ಟೆಂಬರ್ ತಿಂಗಳ ಆರಂಭದಿಂದಲೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಆದರೆ ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಮಳೆಯ ಅರ್ಭಟ ಹೆಚ್ಚಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಕಾರಣ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಹೆಚ್ಚಾಗಲಿದೆ.
ಸೋಮವಾರ ಮಧ್ಯಾಹ್ನ 3 ಗಂಟೆ ವೇಳೆಗೆ ಬೆಂಗಳೂರು ನಗರದಲ್ಲಿ ಮಳೆ ಆರಂಭವಾಯಿತು. ವಿವಿಧ ಪ್ರದೇಶಗಳಲ್ಲಿ ಸುರಿದ ಮಳೆಗೆ ರಸ್ತೆಗಳು ಜಲಾವೃತವಾಗಿದ್ದವು. ಸಂಜೆ 7 ಗಂಟೆ ಬಳಿಕ ಪುನಃ ಮಳೆಯಾಗಿದೆ. ಮಂಗಳವಾರ ಬೆಳಗ್ಗೆಯೂ ಮೋಡ ಕವಿದ ವಾತಾವರಣವಿದೆ.
ಬೆಂಗಳೂರು ನಗರದ ಮೆಜೆಸ್ಟಿಕ್, ವಿಧಾನಸೌಧದ ಸುತ್ತಮುತ್ತ, ಮಲ್ಲೇಶ್ವರ, ಹೆಬ್ಬಾಳ, ಕೋರಮಂಗಲ, ರಾಜಾಜಿನಗರ, ಜೆಪಿ ನಗರ, ಆರ್. ಆರ್. ನಗರ, ಕೆಂಗೇರಿ ಮುಂತಾದ ಪ್ರದೇಶಗಳಲ್ಲಿ ಸೋಮವಾರ ಭಾರೀ ಮಳೆಯಾಗಿದೆ.
ಸೆಪ್ಟೆಂಬರ್ ತಿಂಗಳ ಅಂತ್ಯದ ತನಕ ಕರ್ನಾಟಕದಲ್ಲಿ ಮಳೆ ಮುಂದುವರೆಯಲಿದೆ. ವಿವಿಧ ರಾಜ್ಯಗಳಲ್ಲಿ ಇನ್ನೂ 4 ದಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನಿಡಿದೆ. ಗುಜರಾತ್ನಲ್ಲಿ ಇನ್ನೂ 4 ದಿನ, ಕೇರಳದಲ್ಲಿ ಸೆಪ್ಟೆಂಬರ್ 23ರ ತನಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಡಿಕೆಗಿಂತ ಹೆಚ್ಚು ಮಳೆ ಸೆಪ್ಟೆಂಬರ್ ತಿಂಗಳಿನಲ್ಲಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಜುಲೈ ತಿಂಗಳಿನಲ್ಲಿ ಉತ್ತಮ ಮಳೆಯಾಗಿತ್ತು. ಜುಲೈಗೆ ಹೋಲಿಕೆ ಮಾಡಿದರೆ ಆಗಸ್ಟ್ನಲ್ಲಿ ಮಳೆಯ ಪ್ರಮಾಣ ಕಡಿಮೆ ಇತ್ತು. ಆದರೆ ಸೆಪ್ಟೆಂಬರ್ನಲ್ಲಿ ವಾಯುಭಾರ ಕುಸಿತದಿಂದಾಗಿ ವಿವಿಧ ರಾಜ್ಯಗಳಲ್ಲಿ ಮಳೆಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments