Select Your Language

Notifications

webdunia
webdunia
webdunia
webdunia

ಮಳೆ ಅಬ್ಬರ : ವಿವಿಧ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಮಳೆ ಅಬ್ಬರ : ವಿವಿಧ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ
ಬೆಂಗಳೂರು , ಶುಕ್ರವಾರ, 20 ಮೇ 2022 (08:57 IST)
ಬೆಂಗಳೂರು : ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರಿದಿದೆ. ಈ ಹಿನ್ನೆಲೆ ಉಡುಪಿ, ಶಿವಮೊಗ್ಗ, ದಾವಣಗೆರೆ ಶಾಲೆಗಳಿಗೆ ಮುನ್ನೆಚರಿಕೆಯ ಕ್ರಮವಾಗಿ ರಜೆಯನ್ನು ಘೋಷಿಸಲಾಗಿದೆ.
 
ಮಳೆ ಅಬ್ಬರ ರಾಜ್ಯದ ಎಲ್ಲಕಡೆ ಇರುವ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆಯಾಗಿದೆ. ಪರಿಣಾಮ ಉಡುಪಿಯ ಶಾಲಾ-ಕಾಲೇಜ್ಗೆ ರಜೆ ಘೋಷಿಸಲಾಗಿದೆ. ಶಿವಮೊಗ್ಗ, ಉಡುಪಿ, ದಾವಣಗೆರೆ, ಹಾವೇರಿಯಲ್ಲಿ ರಜೆ ಕೊಡಲಾಗಿದೆ.

ಭಾರೀ ಮಳೆಯಿಂದಾಗಿ ಕೆರೆ-ಕಟ್ಟೆಗಳು ಕೋಡಿ ಬಿದ್ದು ಹರಿಯುತ್ತಿದೆ. ಮಳೆಯಿಂದಾಗಿ ಹಲವು ಅವಾಂತರಗಳಾಗಿದ್ದು, ಜನರ ಜೀವನ ಅಸ್ತವ್ಯಸ್ತವಾಗಿದೆ. 

ಹಾವೇರಿ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲೆಗಳಿಗೆ ಎರಡು ದಿನ ರಜೆಯನ್ನು ಜಿಲ್ಲಾಧಿಕಾರಿ ಸಂಜಯ ಶೆಟ್ಟಿಣ್ಣ ಅವರ ಘೋಷಣೆ ಮಾಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ತೀವ್ರವಾದ ಮರಳಿನ ಬಿರುಗಾಳಿ !?