ಕುಮಾರಸ್ವಾಮಿ ಪದಗ್ರಹಣಕ್ಕೆ ಮಳೆ ಕಾಟ: ಶುಭವೋ, ಅಶುಭವೋ?

Webdunia
ಬುಧವಾರ, 23 ಮೇ 2018 (16:21 IST)
ಬೆಂಗಳೂರು: ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಎಚ್ ಡಿ ಕುಮಾರಸ್ವಾಮಿಗೆ ಆರಂಭದಲ್ಲೇ ವರುಣನ ಸ್ವಾಗತ ಸಿಕ್ಕಿದೆ.

ಮಧ್ಯಾಹ್ನದಿಂದಲೇ ಬೆಂಗಳೂರಿನಲ್ಲಿ ಭಾರೀ ಮೋಡ ಕವಿದ ವಾತಾವರಣ ಜತೆಗೆ ಭಾರೀ ಮಳೆಯಾಗುತ್ತಿದ್ದು, ವಿಧಾನಸೌಧದ ಮುಂಭಾಗ ಹಾಕಲಾಗಿರುವ ವೇದಿಕೆ, ಆಸನಗಳು ಅಸ್ತವ್ಯಸ್ತಗೊಂಡಿದೆ.

ಕುಮಾರಸ್ವಾಮಿ ಸಿಎಂ ಆಗುವುದನ್ನು ನೋಡಲು ನೆರೆದಿದ್ದ ಜನ ಕುರ್ಚಿಗಳನ್ನೇ ಎತ್ತಿ ಮಳೆಯಿಂದ ರಕ್ಷಣೆ ಪಡೆಯುತ್ತಿದ್ದಾರೆ. ಇನ್ನೊಂದೆಡೆ ಗಣ್ಯರು ಕೂರಬೇಕಾಗಿದ್ದ ಆಸನವೂ ಮಳೆಯಿಂದಾಗಿ ಒದ್ದೆಯಾಗಿದೆ. ಹಾಗಿದ್ದರೂ ಇಲ್ಲಿಯೇ ಕಾರ್ಯಕ್ರಮ ನಡೆಸಲು ಉದ್ದೇಶಿಸಿರುವುದರಿಂದ ವೇದಿಕೆಗೆ ಸಣ್ಣದಾದ ಚಪ್ಪರ ಹಾಕಲಾಗಿದೆ.

ಮಳೆ ಬಂದಿರುವ ಬಗ್ಗೆ ಜೆಡಿಎಸ್ ಅಭಿಮಾನಿಗಳು, ವಿರೋಧಿಗಳಲ್ಲಿ ಚರ್ಚೆಯೇ ಶುರುವಾಗಿದೆ. ಮಳೆ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವ ಮೂಲಕ ಇದೊಂದು ಅಪವಿತ್ರ ಮೈತ್ರಿ ಎಂದು ದೇವರೇ ಸಂಕೇತ ನೀಡಿದ್ದಾನೆಂದು ಬಿಜೆಪಿ ಅಭಿಮಾನಿಗಳು ಹೇಳುತ್ತಿದ್ದರೆ, ಇನ್ನೊಂದೆಡೆ ರಾಜ್ಯ ದ ವಿವಿಧೆಡೆಯಿಂದ ಬಂದಿರುವ ಕುಮಾರಸ್ವಾಮಿ ಅಭಿಮಾನಿಗಳು ಮಳೆ ಶುಭ ಲಕ್ಷಣ ಎಂದು ಬಣ್ಣಿಸುತ್ತಿದ್ದಾರೆ. ಅಂತೂ ಮಳೆಯಿಂದಾಗಿ ಕಾರ್ಯಕ್ರಮಕ್ಕೆ ಕೊಂಚ ಅಡಚಣೆಯಾಗಿರುವುದಂತೂ ನಿಜ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಚೆನ್ನಮ್ಮ ನಿಧನ: ಡಿ ದೇವೇಗೌಡ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಕುಟುಂಬಕ್ಕೆ ಮೋದಿ ಪರಿಹಾರ ಘೋಷಣೆ

ಟಿಎಂಸಿ ಬಿಟ್ಟು ಹೋದವರು ಮತ್ತೇ ವಾಪಾಸ್ ಬಂದ್ರೆ ನಾನು ರಾಜೀನಾಮೆ ಕೊಡ್ತೇನೆ: ಅಭಿಷೇಕ್ ಬ್ಯಾನರ್ಜಿ

ಚೆನ್ನಮ್ಮರ ಮೇಲೆ ದೇವೇಗೌಡರ ಕುಟುಂಬದ ಸದಸ್ಯನಿಂದಲೇ ನಡೆದಿದ್ದು ಆ್ಯಸಿಡ್ ದಾಳಿ, ಎಲ್ಲಿ, ಯಾವಾಗ ಗೊತ್ತಾ

ಬಂಡಾಯ ಟಿಎಂಸಿ, ಯುಬಿಟಿ ಸೇನಾ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಇಂದು ನಿರ್ಧಾರ ಸಾಧ್ಯತೆ

ಮುಂದಿನ ಸುದ್ದಿ
Show comments