Webdunia - Bharat's app for daily news and videos

Install App

ಮಳೆಯಿಂದ ಹಲವೆಡೆ ಅವಾಂತರ!

Webdunia
ಶುಕ್ರವಾರ, 6 ಮೇ 2022 (08:51 IST)
ಬೆಂಗಳೂರು : ಸಿಲಿಕಾನ್ ಸಿಟಿ ಸೇರಿ ರಾಜ್ಯದ ಹಲವೆಡೆ ಅಕಾಲಿಕ ಮಳೆಯ ಅಬ್ಬರ ಅವಾಂತರ ಮುಂದುವರಿದಿದೆ.
 
ಇಂದು ಮಧ್ಯಾಹ್ನ ಸಿಲಿಕಾನ್ ಸಿಟಿಯಲ್ಲಿ ಸುರಿದ ಧಾರಾಕಾರ ಮಳೆಯಿಂದ ವಾಹನ ಸವಾರರು ಪರದಾಡಿದ್ರು.
ಬುಧವಾರ ರಾತ್ರಿ ಹುಬ್ಬಳ್ಳಿಯಲ್ಲಿ ರಣಭೀಕರ ಬಿರುಗಾಳಿ, ಮಳೆಗೆ ಕಿಮ್ಸ್ ಆಸ್ಪತ್ರೆಯ ತಾತ್ಕಾಲಿಕ ಮೇಲ್ಛಾವಣಿ ಕಿತ್ತು ಹೋಗಿದೆ.

ಆಸ್ಪತ್ರೆಯ ಡೋರ್, ಕಿಟಕಿಯ ಗಾಜುಗಳು ಪೀಸ್ ಪೀಸ್ ಆಗಿವೆ. ಹುಬ್ಬಳ್ಳಿಯ ವಿದ್ಯಾನಗರದಲ್ಲಂತೂ ಬಿರುಗಾಳಿಗೆ ಸಿಲುಕಿ ವಿದ್ಯಾರ್ಥಿನಿಯರು ಒದ್ದಾಡಿದ್ರು. ಇನ್ನು ಸ್ವಲ್ಪ ಜೋರಾಗಿ ಬಿರುಗಾಳಿ ಬೀಸಿದ್ರೆ ಅವರು ಕೂಡ ಹಾರುತ್ತಿದ್ರು ಎನ್ನುವ ಸ್ಥಿತಿ ನಿರ್ಮಾಣ ಆಗಿತ್ತು.

ಬಾಗಲಕೋಟೆಯ ಕೊರ್ತಿ ಗ್ರಾಮದಲ್ಲಿ ಗಾಳಿ ಮಳೆಗೆ ಪುನರ್ವಸತಿ ಸಂತ್ರಸ್ತರ ತಾತ್ಕಾಲಿಕ ಶೆಡ್ಗಳು ಹಾರಿಹೋಗಿವೆ. ಅಪಾರ ಪ್ರಮಾಣದ ಧವಸಧಾನ್ಯ ನೀರುಪಾಲಾಗಿದೆ. ಚನ್ನಗಿರಿ ತಾಲೂಕಿನ ಕಣಿವೆಬಿಳಚಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಬೃಹತ್ ಸೇತುವೆಯೊಂದು ವರುಣನ ಅಬ್ಬರಕ್ಕೆ ಮುರಿದುಬಿದ್ದಿದೆ.

ಚಿಕ್ಕಮಗಳೂರಲ್ಲಿ ಬೃಹತ್ ಮರ, ವಿದ್ಯುತ್ ಕಂಬ ಕಾರಿನ ಮೇಲೆ ಬಿದ್ದು ವಾಹನ ಜಖಂ ಆಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ, ದೆಹಲಿ ಇಂದಿರಾಗಾಂಧಿ ಏರ್‌ಪೋರ್ಟ್‌ ಒಳಗೂ ನುಗ್ಗಿದ ನೀರು, Video

ಆಪರೇಷನ್ ಆಶ್ದಾರ್ ಅಡಿಯಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಂತರ್ ಮಂತರ್‌ನಲ್ಲಿ ನಡೆದ ಹಲ್ಲೆ ಪ್ರಕರಣ: 72 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಬೇಕು

ಇದೊಂದು ಪವಾಡ: 10ದಿನಗಳ ಬಳಿಕ ಬದುಕುಳಿದ ಮಹರ್ಜನ್ ಕುಟುಂಬದ ಪ್ರತಿಕ್ರಿಯೆ

ಡಿಕೆ ಶಿವಕುಮಾರ್‌ ಡಮ್ಮಿ, ರಿಮೋಟ್ ಕಂಟ್ರೋಲ್ಡ್‌ ಸಿಎಂ: ಆರ್‌ ಅಶೋಕ್ ಕಿಡಿ

ಮುಂದಿನ ಸುದ್ದಿ
Show comments