Select Your Language

Notifications

webdunia
webdunia
webdunia
webdunia

ರಜನಿಕಾಂತ್‌ ಅಭಿನಯದ ‘ಕಾಲಾ’ ಚಿತ್ರ ಕರ್ನಾಟಕದಲ್ಲಿ ರಿಲೀಸ್ ಆಗದಂತೆ ಕನ್ನಡ ಪರ ಸಂಘಟನೆಗಳಿಂದ ತಡೆ

ರಜನಿಕಾಂತ್‌ ಅಭಿನಯದ ‘ಕಾಲಾ’ ಚಿತ್ರ ಕರ್ನಾಟಕದಲ್ಲಿ ರಿಲೀಸ್ ಆಗದಂತೆ ಕನ್ನಡ ಪರ ಸಂಘಟನೆಗಳಿಂದ ತಡೆ
ಮೈಸೂರು , ಭಾನುವಾರ, 27 ಮೇ 2018 (07:08 IST)
ಮೈಸೂರು : ಸೂಪರ್‌ಸ್ಟಾರ್‌ ರಜನಿಕಾಂತ್‌ ಅವರು ಕಾವೇರಿ ವಿವಾದದಲ್ಲಿ ಕರ್ನಾಟಕದ ವಿರುದ್ಧ ಮಾತನಾಡಿದ ಕಾರಣ ಇದೀಗ ಕನ್ನಡ ಪರ ಸಂಘಟನೆಗಳ ಅಧ್ಯಕ್ಷ ವಾಟಾಳ್‌ ನಾಗರಾಜ್‌ ಅವರು ರಜನಿಕಾಂತ್‌ ಅವರ  ಕಾಲ ಚಿತ್ರ ಕರ್ನಾಟಕದಲ್ಲಿ ಬಿಡುಗಡೆ ಮಾಡುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು ' ರಜನಿ ಕಾಂತ್‌ ಅವರು ಕನ್ನಡ ದ್ರೋಹಿ. ಆದ್ದರಿಂದ ಅವರ ಚಿತ್ರಕ್ಕೆ ಕರ್ನಾಟಕದಲ್ಲಿ ಅವಕಾಶ ನೀಡಬಾರದು. ಚಿತ್ರ ಬಿಡುಗಡೆಯಾದಲ್ಲಿ ಕನ್ನಡಪರ ಸಂಘಟನೆಗಳು ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ರಜನಿಕಾಂತ್ ಅಭಿನಯದ ‘ಕಾಲಾ’ ಚಿತ್ರ ಜೂನ್ 7 ರಂದು ರಿಲೀಸ್ ಆಗುತ್ತಿದ್ದು, ಕಬಾಲಿ ಚಿತ್ರದ ನಿರ್ದೇಶಕ ಪಾ ರಂಜಿತ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ಪದವಿ ಕೊಟ್ಟರೆ ನಿಭಾಯಿಸುವೆ: ಕೆ.ಶ್ರೀನಿವಾಸಗೌಡ