Select Your Language

Notifications

webdunia
webdunia
webdunia
Wednesday, 9 April 2025
webdunia

ಶಾಸಕರಿಗೆ ಆಮಿಷ ಒಡ್ಡಲು ಬಿಜೆಪಿಗೆ ಹಣ ನೀಡಿದ ಗುಜರಾತ್ ಉದ್ಯಮಿ ಯಾರು? ರಮ್ಯಾ ಪ್ರಶ್ನೆ

ಕರ್ನಾಟಕ ರಾಜಕೀಯ
ಬೆಂಗಳೂರು , ಗುರುವಾರ, 17 ಮೇ 2018 (08:21 IST)
ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ರಚಿಸಲು ಸರ್ಕಸ್ ಮಾಡುತ್ತಿರುವ ಬಿಜೆಪಿ ಕಾಂಗ್ರೆಸ್-ಬಿಜೆಪಿ ಶಾಸಕರನ್ನು ಸೆಳೆಯಲು 100 ಕೋಟಿ ರೂ. ಆಮಿಷ ಒಡ್ಡಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ಹಾಗಿದ್ದರೆ ಬಿಜೆಪಿಯವರಿಗೆ ಇಷ್ಟೊಂದು ಹಣ ಬಂದಿದ್ದು ಹೇಗೆ ಎಂದು ಇದೀಗ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಟ್ವಿಟರ್ ನಲ್ಲಿ ಪ್ರಶ್ನೆ ಮಾಡಿದ್ದಾರೆ.

‘ಶಾಸಕರಿಗೆ 100 ಕೋಟಿ ರೂ. ಆಮಿಷ ಒಡ್ಡಲು ಗುಜರಾತ್ ನ ಯಾವ ಉದ್ಯಮಿ ಬಿಜೆಪಿಗೆ ಸಹಕರಿಸುತ್ತಿದ್ದಾರೆ? ಆತನ ಜತೆಗೆ ಬಿಜೆಪಿ ಮಾಡಿಕೊಂಡಿರುವ ಒಪ್ಪಂದ ಏನು? ಬಿಜೆಪಿಯ ಭ್ರಷ್ಟಾಚಾರಕ್ಕೆ ಪಬ್ಲಿಕ್ ಸೆಕ್ಟರ್ ಬ್ಯಾಂಕ್ ಗಳು ಬೆಲೆ ತೆರಬೇಕಾಗಬಹುದೇ? ಇದಕ್ಕೆ ನಮ್ಮ ತಾತ್ಕಾಲಿಕ ವಿತ್ತ ಸಚಿವ ಪಿಯೂಷ್ ಗೋಯೆಲ್ ಉತ್ತರಿಸುತ್ತಾರೆಯೇ?’ ಎಂದು ರಮ್ಯಾ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಪತ್ರಕರ್ತರ ಮೇಲೆಯೇ ಸಿಟ್ಟಿಗೆದ್ದ ಕುಮಾರಸ್ವಾಮಿ