Publish Date: Thu, 17 May 2018 (08:54 IST)
Updated Date: Thu, 17 May 2018 (08:56 IST)
ನವದೆಹಲಿ: ಕರ್ನಾಟಕದಲ್ಲಿ ಬಿಜೆಪಿಗೆ ಸರ್ಕಾರ ರಚಿಸಲು ರಾಜ್ಯಪಾಲರು ಆಹ್ವಾನ ನೀಡಿರುವ ಬಗ್ಗೆ ಕಾಂಗ್ರೆಸ್ ಏಟಿಗೆ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ತಿರುಗೇಟು ನೀಡಿದ್ದಾರೆ.
ಹಿಂದೆ ಯುಪಿಎ ಅಧಿಕಾರದಲ್ಲಿದ್ದಾಗ ಹಲವು ಬಿಜೆಪಿ ಸರ್ಕಾರಗಳನ್ನು ಕಾಂಗ್ರೆಸ್ ಉರುಳಿಸಿದೆ. ಈಗ ಅದೇ ಕಾಂಗ್ರೆಸ್ ನಮಗೆ ನೈತಿಕತೆಯ ಪಾಠ ಮಾಡುತ್ತಿದೆ ಎಂದು ರವಿಶಂಕರ್ ಪ್ರಸಾದ್ ಲೇವಡಿ ಮಾಡಿದ್ದಾರೆ.
ಇನ್ನು, ಕರ್ನಾಟಕದಲ್ಲಿ ರಾಜ್ಯಪಾಲರು ಕಾನೂನಿನ ಚೌಕಟ್ಟಿನಲ್ಲೇ ಈ ನಿರ್ಧಾರ ಮಾಡಿದ್ದಾರೆ ಎಂದು ರವಿಶಂಕರ್ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಅದಕ್ಕೆ ಸುಪ್ರೀಂಕೋರ್ಟ್ ನ ತೀರ್ಪಿನ ಪ್ರತಿಯನ್ನೂ ಪತ್ರಿಕಾಗೋಷ್ಠಿಯಲ್ಲಿ ಓದಿದ್ದಾರೆ. ಬಹುದೊಡ್ಡ ಪಕ್ಷಕ್ಕೆ ಮೊದಲ ಅವಕಾಶ ನೀಡಬೇಕು ಎಂಬ ನಿಯಮದಂತೆ ಬಿಜೆಪಿಗೆ ಅವಕಾಶ ನೀಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.