Webdunia - Bharat's app for daily news and videos

Install App

ಬಿಗ್ ಟ್ವಿಸ್ಟ್! ವೀರಪ್ಪ ಮೊಯಿಲಿ ಟ್ವೀಟ್ ನ ನಿಜ ಕಾರಣ ಬಯಲಾಯ್ತು!

Webdunia
ಶುಕ್ರವಾರ, 16 ಮಾರ್ಚ್ 2018 (13:17 IST)
ಬೆಂಗಳೂರು: ವೀರಪ್ಪ ಮೊಯಿಲಿಯವರ ವಿವಾದಾತ್ಮಕ ಟ್ವೀಟ್ ನ ಹಿಂದಿನ ನಿಜ ಕಾರಣ ಇದೀಗ ಬಯಲಾಗಿದೆ. ಇದಕ್ಕೆಲ್ಲಾ ಲೋಕೋಪಯೋಗಿ ಇಲಾಖೆ ಸಚಿವ ಮಹದೇವಪ್ಪ ಮತ್ತು ಮೊಯಿಲಿ ನಡುವೆ ನಡೆದ ಮಾತಿನ ಚಕಮಕಿ ಕಾರಣ ಎಂದು ಅರಿವಾಗಿದೆ.

ನಿನ್ನೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ತಯಾರಿಸಲು ಏರ್ ಪೋರ್ಟ್ ಬಳಿ ಇರುವ ಮಹದೇವಪ್ಪ ಅವರಿಗೆ ಸೇರಿದ ರೆಸಾರ್ಟ್ ನಲ್ಲಿ ಸಭೆ ನಡೆದಿತ್ತು. ಆ ಸಭೆಯಲ್ಲಿ ಕಾರ್ಕಳ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಮೊಯಿಲಿ ಪುತ್ರ ಹರ್ಷ ಮೊಯಿಲಿ ಹೆಸರು ಸೇರಿಸಲು ತೀವ್ರ ವಿರೋಧ ವ್ಯಕ್ತವಾಯಿತು.

ಆದರೆ ರಸ್ತೆ ಗುತ್ತಿಗೆದಾರ ಉದಯ್ ಕುಮಾರ್ ಎಂಬವರ ಹೆಸರು ಸೇರಿಸಲಾಗಿತ್ತು. ಇದಕ್ಕೆ ಕೋಪಗೊಂಡ ಮೊಯಿಲಿ ಮಹದೇವಪ್ಪನವರನ್ನು ರಾಜಕೀಯವಾಗಿ ಮುಗಿಸುತ್ತೇನೆ ಎಂದಿದ್ದರಂತೆ. ಇದೇ ಸಿಟ್ಟಿನಲ್ಲಿ ಮೊಯಿಲಿ ಟ್ವೀಟ್ ಮಾಡಿದ್ದರೆನ್ನಲಾಗಿದೆ. ಆದರೆ ವಿವಾದವಾಗುತ್ತಿದ್ದಂತೆ ಇದೀಗ ತಮ್ಮ ಖಾತೆ ಹ್ಯಾಕ್ ಆಗಿದೆ. ನಾನು ಟ್ವೀಟ್ ಮಾಡಿಲ್ಲ ಎನ್ನುತ್ತಿದ್ದಾರೆ. ಅದೇನೇ ಇದ್ದರೂ ಈ ಟ್ವೀಟ್ ಈಗಾಗಲೇ ಕಾಂಗ್ರೆಸ್ ಗೆ ಸಾಕಷ್ಟು ಹಾನಿ ಮಾಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ            

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments