ರೆಡ್ ಅಲರ್ಟ್ ಘೋಷಣೆ!

Webdunia
ಬುಧವಾರ, 22 ಜೂನ್ 2022 (07:25 IST)
ಬೆಂಗಳೂರು : ರಾಜ್ಯದ ಕರಾವಳಿ ಭಾಗದಲ್ಲಿ ಮುಂಗಾರು ಚುರುಕಾಗಿದೆ.
 
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ವರುಣದೇವ ಅಬ್ಬರಿಸುತ್ತಿದ್ದಾನೆ. ಕಾರವಾರದ ರೈಲ್ವೆ ನಿಲ್ದಾಣ ರಸ್ತೆ, ಹಬ್ಬುವಾಡ, ಸೋನಾರವಾಡ, ಸಾಯಿಬಾಬಾ ಮಂದಿರ ರಸ್ತೆಗಳು ಜಲಾವೃತವಾಗಿ ಜನ ಪರದಾಡಿದ್ರು.

ಮನೆಗಳಿಗೆ ನೀರು ನುಗ್ಗಿದ್ದಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಉತ್ತರ ಕನ್ನಡ ಜಿಲ್ಲೆಯಾದ್ಯಂತ ನಾಳೆಯು ಸಹ ವರುಣನ ರೌದ್ರಾವತಾರ ಮುಂದುವರಿಯಲಿದ್ದು, ಜೂನ್ 25ರ ವರೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಇದರೊಂದಿಗೆ ಸ್ಥಳೀಯರು, ಪ್ರವಾಸಿಗರು ನದಿ ಹಾಗೂ ಸಮುದ್ರದಲ್ಲಿ ಇಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಕೋಲಾರ ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲೂ ಮುಂದಿನ 48 ಗಂಟೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರಿನಲ್ಲೂ ಗುಡುಗು ಸಹಿತ ಜೋರು ಮಳೆಯಾಗುವ ಸಾಧ್ಯತೆಯಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Nipah Virus: ತಿಳಿದುಕೊಳ್ಳಲೇ ಬೇಕಾದ ಅಂಶಗಳು ಇಲ್ಲಿದೆ

ರಾಷ್ಟ್ರೀಯ ಪ್ಯಾರಾಲಿಂಪಿಕ್ ಪವರ್‌ಲಿಫ್ಟಿಂಗ್: ಪುಷ್ಕರ್ ಸಿಂಗ್ ಧಾಮಿ ಚಾಲನೆ

ಲಕ್ಕುಂಡಿ ನಿಧಿ ಪ್ರಕರಣ: ಗದಗದಲ್ಲಿ ಮಹತ್ವದ ಬೆಳವಣಿಗೆ

ಪೊಂಗಲ್ ಹಬ್ಬದ ಸಂಭ್ರಮದಲ್ಲಿ ಬೆಂಗಳೂರು ಟು ಕೊಟ್ಟಾಯಂ ವಿಶೇಷ ರೈಲು

ಗೌರಿ ಲಂಕೇಶ್‌ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಗೆದ್ದಿದ್ದು ಎಲ್ಲಿ ಗೊತ್ತಾ

ಮುಂದಿನ ಸುದ್ದಿ
Show comments