Webdunia - Bharat's app for daily news and videos

Install App

ರಾಜ್ಯ ಸರ್ಕಾರದಿಂದ ನಿರ್ಬಂಧ?

Webdunia
ಭಾನುವಾರ, 19 ಸೆಪ್ಟಂಬರ್ 2021 (07:52 IST)
ಬೆಂಗಳೂರು : ಸರ್ಕಾರದ ಪೂರ್ವಾನುಮತಿ ಪಡೆಯದೆ ಮಾಧ್ಯಮಗಳಿಗೆ ಯಾವುದೇ ಹೇಳಿಕೆ ನೀಡದಂತೆ ರಾಜ್ಯದ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ನಿರ್ಬಂಧ ಹೇರಿದೆ.

ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಆದೇಶ ಹೊರಡಿಸಿದ್ದು, ರಾಜ್ಯದ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳು ಸರ್ಕಾರದ ಪೂರ್ವಾನುಮತಿ ಪಡೆಯದೆ ಮಾಧ್ಯಮಗಳಿಗೆ ಯಾವುದೇ ಹೇಳಿಕೆ ನೀಡಬಾರದು, ಕೇವಲ ಇಲಾಖೆಯಅಭಿವೃದ್ದಿ ಯೋಜನೆಗಳ ಬಗ್ಗೆ ಮಾತ್ರ ಮಾಧ್ಯಮಗಳಿಗೆ ಮಾಹಿತಿ ನೀಡಲು ಅವಕಾಶ ನೀಡಲಾಗಿದೆ. ಉಳಿದಂತೆ ಕುಂದು ಕೊರತೆಗಳ ಬಗ್ಗೆ ಹೇಳಿಕೆ ನೀಡದಂತೆ ನಿರ್ಬಂಧ ಹೇರಲಾಗಿದೆ ಎಂದು ಆದೇಶಿಸಿದ್ದಾರೆ.
ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳು ವೈಯಕ್ತಿಕ ಸಾಮಾಜಿಕ ಮಾಧ್ಯಮಗಳನ್ನು ಹೊಂದದಿರಲು ಸೂಚನೆ ನೀಡಲಾಗಿದ್ದು, ಅಧಿಕೃತ ಸರ್ಕಾರಿ ಮಾಧ್ಯಮಗಳ ಮೂಲಕವೇ ಹೇಳಿಕೆಗಳನ್ನು ಪ್ರಕಟಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಆದೇಶ ಹೊರಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments