Webdunia - Bharat's app for daily news and videos

Install App

ಫಲಿತಾಂಶ : ಎಣ್ಣೆ ಅಂಗಡಿಗಳು ಕ್ಲೋಸ್!

Webdunia
ಗುರುವಾರ, 10 ಮಾರ್ಚ್ 2022 (08:47 IST)
ಲಕ್ನೋ : ಕುತೂಹಲದಿಂದ ಕಾಯುತ್ತಿರುವ ಪಂಚ ರಾಜ್ಯ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾಗಲಿದೆ.

ಆದರೆ, ಜಯದ ಗೆಲುವಿನ ಸಂಭ್ರಮ ಆಚರಿಸಲು, ಸೋಲಿನ ದುಃಖ ಮರೆಯಲು "ನಶೆ" ಇರುವುದಿಲ್ಲ. ಅಂದರೆ, ಚುನಾವಣಾ ಫಲಿತಾಂಶದ ದಿನವಾಗಿರುವ ಕಾರಣ ರಾಜ್ಯ ಎಲ್ಲಾ ಮದ್ಯದಂಗಡಿಗಳು ಹಾಗೂ ಬಾರ್ ಗಳನ್ನು ಮುಚ್ಚುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದ್ದು, ಇಡೀ ದಿನ ಯಾವುದೇ ಕಾರಣಕ್ಕೂ ಮದ್ಯದ ಅಂಗಡಿಗಳನ್ನು ತೆರೆಯುವಂತಿಲ್ಲ ಎಂದು ಅಬಕಾರಿ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ. ನಿಯಮ ಉಲ್ಲಂಘಿಸಿದವರ ಮೇಲೆ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ಇದರಲ್ಲಿ ನೀಡಲಾಗಿದೆ.

ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಲಕ್ನೋ ಬಿಡಿ ರಾಮ್ ತಿವಾರಿ ಈ ಕುರಿತಂತೆ ಮಾಹಿತಿ ನೀಡಿದ್ದು, ಮಾರ್ಚ್ 10 ರಂದು ಮತ ಎಣಿಕೆಗೆ ಸಂಬಂಧಿಸಿದಂತೆ, ಎಲ್ಲಾ ಮತ ಎಣಿಕೆ ಕೇಂದ್ರಗಳಲ್ಲಿನ ಸ್ಟ್ರಾಂಗ್ ರೂಮ್ಗಳಿಗೆ ಮೂರು ಲೇಯರ್ ಸಿಎಪಿಎಫ್ ಭದ್ರತೆ ಇದೆ.

ಮೊದಲ ಅಂಚೆ ಮತಪತ್ರದ ಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದೆ. ಅದೇ ಸಮಯದಲ್ಲಿ, ಇವಿಎಂ ಮೂಲಕ ಚಲಾವಣೆಯಾದ ಮತಗಳ ಎಣಿಕೆಯು ಬೆಳಿಗ್ಗೆ 8:30 ರಿಂದ ಪ್ರಾರಂಭವಾಗಲಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments