Webdunia - Bharat's app for daily news and videos

Install App

ಬಿಎಸ್‌ವೈಗೆ ಮಾಜಿ ಸಚಿವ ರೇವುನಾಯಕ ಬೆಳಮಗಿ ಸೆಡ್ಡು

Webdunia
ಶನಿವಾರ, 21 ಏಪ್ರಿಲ್ 2018 (15:55 IST)
ಕಲಬುರಗಿ ಗ್ರಾಮೀಣ ಕ್ಷೇತ್ರಕ್ಕೆ ಟಿಕೆಟ್ ಸಿಗದೆ ವಂಚಿತರಾದ ಮಾಜಿ ಸಚಿವ ರೇವುನಾಯಕ ಬೆಳಮಗಿ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ತೊಡೆ ತಟ್ಟಿದ್ದಾರೆ. 
ಟಿಕೆಟ್ ತಪ್ಪಿದ ಹಿನ್ನಲೆ ಕಲಬುರಗಿಯ ಸಂತೋಷ ಕಾಲೋನಿ ತಮ್ಮ ನಿವಾಸದ ಮುಂದೆ ಬೆಂಬಲಿಗರ ಸಭೆಯನ್ನು ನಡೆಸಿರುವ ರೇವುನಾಯಕ, ಬೆಂಬಲಿಗರ ಆಸೆಯಂತೆ ಬಿಜೆಪಿ ಪಕ್ಷ ತೊರೆದು, ಯಾವುದದರೂ ಪಕ್ಷ ಅಥವಾ ಪಕ್ಷೇತರವಾಗಿ ಸ್ಪರ್ಧಿಸುವದಾಗಿ ಸ್ಪಷ್ಟಪಡಿಸಿದರು. 
 
ಇದೇ ವೇಳೆ ಏಕವಚನದಲ್ಲಿ ಬಿಎಸ್ ವೈ ವಿರುದ್ಧ ವಾಗ್ದಾಳಿ ನಡೆಸಿದ ಬೆಳಮಗಿ, ಬಂಜಾರ ಸಮುದಾಯದ ತಾಕತ್ತು ಎಷ್ಟು ಅನ್ನೋದನ್ನು ತೋರಿಸುತ್ತೇನೆ ಎಂದು ತೊಡೆ ತಟ್ಟಿದರು. ಸಮ್ರಿಶ ಸರ್ಕಾರದಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ಸ್ಥಾನ ಬಿಟ್ಟು ಕೊಡಲಿಲ್ಲ ಎಂಬ ಕಾರಣಕ್ಕೆ ರಾಜ್ಯದಾದ್ಯಂತ ಸಂಕಲ್ಪಯಾತ್ರೆ ಮಾಡಿದ್ದೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಇದೀಗ ಯಡಿಯೂರಪ್ಪ ತಮ್ಮ ಬೆನ್ನಿಗೆ ಚುರಿ ಹಾಕಿದ್ದು, ತಾವು ಸಹ ರಾಜ್ಯದಾದ್ಯಂತ ಸಂಕಲ್ಪಯಾತ್ರೆ ನಡೆಸಿ ಯಡಿಯೂರಪ್ಪ ವಿರುದ್ಧ ಪ್ರಚಾರ ಮಾಡುವದಾಗಿ ಗುಡುಗಿದರು. ಜೆಡಿಎಸ್ ಅಥವಾ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಹಿತಚಿಂತಕರು ಒತ್ತಡ ಹೇರುತ್ತಿದ್ದಾರೆ. ಸದ್ಯ ವೀರಶೈವ ಮತ್ತು ಲಿಂಗಾಯತ ಮುಖಂಡರು ಸಭೆ ನಡೆಸುತ್ತಿದ್ದು, ಸಭೆ ನಂತರ ಸೂಕ್ತ ನಿರ್ಧಾರ ಕೈಗೊಳ್ಳುವದಾಗಿ ರೇವುನಾಯಕ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ಗೆ ನುಗ್ಗಿ ಹೊಡೆಯಿರಿ: ಅಮಿತ್ ಶಾ ಬಳಿ ಇದನ್ನೇ ಹೇಳಿದ್ದೇನೆ ಎಂದ ಸಚಿವ ಸಂತೋಷ್‌ ಲಾಡ್‌

ಇಂದಿರಾಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಸಿದ್ದರಾಮಯ್ಯರನ್ನು ಉಚ್ಛಾಟಿಸುವ ಧಮ್‌ ಇದ್ಯಾ: ಡಿಕೆಶಿಗೆ ಅಶೋಕ್‌ ಸವಾಲು

ಗಡಿಯಲ್ಲಿ ಮತ್ತೆ ಪಾಕ್‌ ಕಿರಿಕ್‌: ಅಪ್ರಚೋದಿತ ಗುಂಡಿನ ದಾಳಿಗೆ ತಕ್ಕ ಉತ್ತರ ನೀಡಿದ ಭಾರತೀಯ ಸೇನೆ

ಕೋಲ್ಕತ್ತಾದಲ್ಲಿ ಹೊತ್ತಿ ಉರಿದ ಹೋಟೆಲ್‌ ಕಟ್ಟಡ: 15 ಮಂದಿ ಸಜೀವ ದಹನ, ಹಲವರಿಗೆ ಗಾಯ

ಶೀಘ್ರದಲ್ಲೇ ಮೂರು ತಿಂಗಳ ಗೃಹಲಕ್ಷ್ಮಿ ಹಣ ರಿಲೀಸ್‌: ಸಚಿವೆ ಹೆಬ್ಬಾಳ್ಕರ್ ಹೇಳಿದ್ದೇನು

ಮುಂದಿನ ಸುದ್ದಿ
Show comments