Webdunia - Bharat's app for daily news and videos

Install App

ಆರ್ ಆರ್ ನಗರದ ಕಿಂಗ್ ಯಾರು? ಇಂದು ಬರಲಿದೆ ಚುನಾವಣೆ ರಿಸಲ್ಟ್

Webdunia
ಗುರುವಾರ, 31 ಮೇ 2018 (09:30 IST)
ಬೆಂಗಳೂರು: ರಾಜ್ಯ ರಾಜಧಾನಿಯ ಪ್ರತಿಷ್ಠಿತಿ ಕ್ಷೇತ್ರವಾದ ರಾಜರಾಜೇಶ್ವರಿ ನಗರದ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಮೂರೂ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದೆ.

ನಕಲಿ ವೋಟರ್ ಐಡಿ ಪ್ರಕರಣದಿಂದಾಗಿ ಈ ಕ್ಷೇತ್ರದ ಚುನಾವಣೆ ಮುಂದೂಡಲಾಗಿತ್ತು. ಸೋಮವಾರ ನಡೆದ ಚುನಾವಣೆಯಲ್ಲಿ ಶೇ. 53 ರಷ್ಟು ಮತದಾನವಾಗಿತ್ತು.

ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚಿಸಿದರೂ ಈ ಕ್ಷೇತ್ರದಲ್ಲಿ ಬೇರೆ ಬೇರೆಯಾಗಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರು. ಅತ್ತ ಬಿಜೆಪಿಯಿಂದ ಯುವ ನಾಯಕ ತುಳಸಿ ಮುನಿರಾಜು ಕಣಕ್ಕಿಳಿದಿದ್ದರು. ತನ್ನ ಅಭ್ಯರ್ಥಿ ಗೆದ್ದು ಸಮ್ಮಿಶ್ರ ಸರ್ಕಾರಕ್ಕೆ ಮುಖಭಂಗ ಮಾಡುವ ತವಕದಲ್ಲಿ ಬಿಜೆಪಿಯಿದೆ. ಇನ್ನು ಸಮ್ಮಿಶ್ರ ಸರ್ಕಾರದ ಪಾಲುದಾರರಾಗಿರುವ ಜೆಡಿಎಸ್ ಮತ್ತು ಕಾಂಗ್ರೆಸ್ ತಮ್ಮ ಅಭ್ಯರ್ಥಿ ಗೆದ್ದು, ತಮ್ಮ ತಮ್ಮ ಪಕ್ಷದ ವರ್ಚಸ್ಸು ಹೆಚ್ಚಿಸಿಕೊಳ್ಳುವ ಉತ್ಸಾಹದಲ್ಲಿವೆ. ಯಾರ ಕೈ ಮೇಲಾಗಲಿದೆ ಎಂಬುದು ಸದ್ಯದಲ್ಲೇ ತಿಳಿದುಬರಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments