ಯುದ್ಧ ಸಾರಿದ ರಷ್ಯಾ!

Webdunia
ಗುರುವಾರ, 24 ಫೆಬ್ರವರಿ 2022 (10:32 IST)
ಮಾಸ್ಕೋ  : ನಿರೀಕ್ಷೆಯಂತೆಯೇ ಉಕ್ರೇನ್ ಮೇಲೆ ರಷ್ಯಾ ಅಧಿಕೃತವಾಗಿ ಯುದ್ಧ ಘೋಷಣೆ ಮಾಡಿದೆ.
 
ಪಾಶ್ಚಿಮಾತ್ಯ ದೇಶಗಳ ಒತ್ತಡದ ನಡುವೆಯೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಉಕ್ರೇನ್ ಮೇಲೆ ಗುರುವಾರ 'ಸೇನಾ ಕಾರ್ಯಾಚರಣೆ' ಘೋಷಣೆ ಮಾಡಿದ್ದಾರೆ.

ಉಕ್ರೇನ್ ಸೇನೆಗೆ ಶರಣಾಗುವಂತೆ ಅವರು ಆಗ್ರಹಿಸಿದ್ದಾರೆ. ಇದರಿಂದ ಜಾಗತಿಕ ಮಟ್ಟದಲ್ಲಿ ಭಾರಿ ತಲ್ಲಣ ಉಂಟಾಗಿದೆ. ಈ ಯುದ್ಧವು ಜಗತ್ತಿನಾದ್ಯಂತ ದೇಶಗಳ ಮೇಲೆ ತೀವ್ರ ಕೆಟ್ಟ ಪರಿಣಾಮ ಬೀರುವ ಭೀತಿ ಇದೆ.

ತಮ್ಮ ಉದ್ದೇಶಗಳನ್ನು ಘೋಷಿಸಲು ಪುಟಿನ್ ಅವರು ಟೆಲಿವಿಷನ್ನಲ್ಲಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. "ನಾನು ಸೇನಾ ಕಾರ್ಯಾಚರಣೆ ನಡೆಸಲು ನಿರ್ಧಾರ ತೆಗೆದುಕೊಂಡಿದ್ದೇನೆ" ಎಂದು ಅವರು ಮಾಸ್ಕೋದಲ್ಲಿ ಬೆಳಿಗ್ಗೆ 6 ಗಂಟೆ ಸುಮಾರಿಗೆ ಪ್ರಕಟಣೆ ಹೊರಡಿಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಯಾರಾದರೂ ಮಧ್ಯಪ್ರವೇಶ ಮಾಡಿದರೆ, ಅದಕ್ಕೆ ತಕ್ಕ ಪ್ರತಿಕ್ರಿಯೆ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದು ಅಮೆರಿಕ ನೇತೃತ್ವದ ನ್ಯಾಟೋ ಮಿತ್ರಕೂಟದ ದೇಶಗಳಿಗೆ ಅವರು ರವಾನಿಸುವ ಎಚ್ಚರಿಕೆಯ ಸಂದೇಶವಾಗಿದೆ.

ಉಕ್ರೇನ್ ಸೇನೆಯು ತನ್ನ ಶಸ್ತಾಸ್ತ್ರಗಳನ್ನು ಕೆಳಕ್ಕಿಳಿಸಬೇಕು ಎಂದು ವ್ಲಾಡಿಮಿರ್ ಪುಟಿನ್ ಸಂದೇಶ ನೀಡಿದ್ದಾರೆ. ಪೂರ್ವ ಉಕ್ರೇನ್ನಲ್ಲಿನ ಬಂಡುಕೋರ ನಾಯಕರು ಉಕ್ರೇನ್ ವಿರುದ್ಧ ಸೇನಾ ನೆರವು ನೀಡುವಂತೆ ಮಾಸ್ಕೋಗೆ ಮನವಿ ಮಾಡಿದ ಬೆನ್ನಲ್ಲೇ ಅವರು ಈ ಹೇಳಿಕೆ ನೀಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಜಿ ಸಿಎಂ ಮಮತಾ ಬ್ಯಾನರ್ಜಿ ಮನೆ ಮೇಲೆ ಸಿಐಡಿ ದಾಳಿ, ಪ.ಬಂಗಾಳದಲ್ಲಿ ಮತ್ವದ ಬೆಳವಣಿಗೆ

ಜಪಾನ್ ಬೆನ್ನಲ್ಲೇ ಭಾರತದಿಂದ ಮಾವಿನ ಹಣ್ಣುಗಳ ಆಮದು ನಿಷೇಧಿಸಿದ ನೇಪಾಳ, ಕಾರಣ ಏನ್ ಗೊತ್ತಾ

ಬಿಟ್ ಕಾಯಿನ್ ಅಕ್ರಮ ಹಣ ವರ್ಗಾವಣೆ ಪ್ರಕರಣ: ಮೊಹಮ್ಮದ್ ನಲಪಾಡ್‌, ಸಹೋದರನಿಗೆ ಸಂಕಷ್ಟ

ಮುಂಗಾರುವಿನ ಜಿಟಿ ಜಿಟಿ ಮಳೆಗೆ ಕರಾವಳಿ ಹುಡುಗ್ರಿಗೆ ಮೀನು, ಏಡಿ ಹಿಡಿಯವುದೇ ಒಂದು ಗಮ್ಮತ್, ಏನಿದು ಉಬರ್‌

ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿಯ ಆಗಮನ

ಮುಂದಿನ ಸುದ್ದಿ
Show comments