Webdunia - Bharat's app for daily news and videos

Install App

ಪಾಕ್ ಆಕ್ರಮಿತ ಕಾಶ್ಮೀರ ಭಾರತಕ್ಕೆ ಸೇರಲು ಸಾಧ್ಯವೇ ಇಲ್ಲ! ಮತ್ತೆ ವಿವಾದಿತ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ

Webdunia
ಭಾನುವಾರ, 24 ಜೂನ್ 2018 (08:24 IST)
ನವದೆಹಲಿ: ಕಾಶ್ಮೀರ ಸ್ವಾತಂತ್ರ್ಯ ಬಯಸುತ್ತದೆ ಎಂದು ಹೇಳಿಕೆ ನೀಡಿ ಮೊನ್ನೆಯಷ್ಟೇ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ ಸೈಫುದ್ದೀನ್ ಸೋಜ್ ಮತ್ತೆ ವಿವಾದಿತ ಹೇಳಿಕೆ ನೀಡಿದ್ದಾರೆ.

ಅಣ್ವಸ್ತ್ರ ದಾಳಿಯಾಗದೇ ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಭಾಗವಾಗಲು ಸಾಧ್ಯವೇ ಇಲ್ಲ ಎಂದು ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈಗಾಗಲೇ ಗುಲಾಂ ನಬಿ ಆಜಾದ್ ಭಾರತೀಯ ಸೈನಿಕರು ನಾಗರಿಕರನ್ನು ಕೊಲ್ಲುತ್ತಿದ್ದಾರೆ ಮತ್ತು ಸೈಫುದ್ದೀನ್ ಕಾಶ್ಮೀರ ಸ್ವಾತಂತ್ರ್ಯ ಬಯಸುತ್ತದೆ ಎಂದು ಹೇಳಿ ವಿಪಕ್ಷಗಳ ಟೀಕೆಗೆ ಗುರಿಯಾಗಿದ್ದರು.

ಇದೀಗ ಮತ್ತೆ ಮೊದಲಿನ ವಿವಾದ ತಣ್ಣಗಾಗುವ ಮೊದಲೇ ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಪಾಕ್ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ರ ಸ್ವತಂತ್ರ ಕಾಶ್ಮೀರ ಐಡಿಯಾವನ್ನು ಬೆಂಬಲಿಸಿದ್ದಾರೆ. ಅಷ್ಟೇ ಅಲ್ಲದೆ, ಪಾಕ್ ಆಕ್ರಮಿತ ಕಾಶ್ಮೀರವನ್ನು ಪಾಕ್ ಆಳಲಿ, ಕಾಶ್ಮೀರ ಕಣಿವೆ ಭಾರತದ ಸುಪರ್ದಿಯಲ್ಲಿರಲಿ ಎಂದು ಸಲಹೆಯನ್ನೂ ನೀಡಿದ್ದಾರೆ. ಈ ಹೇಳಿಕೆ ಕಾಂಗ್ರೆಸ್ ಗೆ ಮತ್ತಷ್ಟು ಮುಜುಗರ ತರುವುದಂತೂ ಸತ್ಯ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ಇದೊಂದು ಕೆಲಸ ಮಾಡಿದ್ರೆ ಚಿನ್ನಸ್ವಾಮಿಯಲ್ಲಿ ದುರಂತವಾಗ್ತಾನೇ ಇರಲಿಲ್ಲ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

ಮುಂದಿನ ಸುದ್ದಿ
Show comments