ಇಂದಿನಿಂದ ಶಾಲಾ-ಕಾಲೇಜುಗಳು ಆರಂಭ

Webdunia
ಸೋಮವಾರ, 28 ಫೆಬ್ರವರಿ 2022 (06:28 IST)
ಶಿವಮೊಗ್ಗ : ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹರ್ಷ ಕೊಲೆ ಪ್ರಕರಣದ ಬಳಿಕ ನಗರದ ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದರು.

ಇದೀಗ ಸೋಮವಾರದಿಂದ ಪುನರ್ ಆರಂಭಗೊಳ್ಳುತ್ತಿದೆ. ಶಿವಮೊಗ್ಗ ನಗರದಲ್ಲಿ ಕರ್ಫ್ಯೂ ಜಾರಿ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ರಜೆ ಘೋಷಿಸಿದ್ದರು. ಇದೀಗ ವಾತಾವರಣ ತಿಳಿಯಾಗುತ್ತಿದ್ದಂತೆ, ನಾಳೆಯಿಂದ ಎಂದಿನಂತೆ ಶಾಲಾ ಕಾಲೇಜು ಆರಂಭವಾಗುವುದಾಗಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. 

ಶಿವಮೊಗ್ಗದಲ್ಲಿ ನಗರದಲ್ಲಿ 144 ಸೆಕ್ಷನ್ ಮುಂದುವರಿಕೆ ಮಾಡುವುದಾಗಿ ತಿಳಿಸಿದ್ದು, ಫೆಬ್ರವರಿ 28 ರಿಂದ ಮಾರ್ಚ್ 4 ರವರೆಗೆ 144 ಸೆಕ್ಷನ್ ಮುಂದುವರಿಕೆ ಆಗಲಿದೆ. ಬೆಳಗ್ಗೆ 6 ರಿಂದ ಸಂಜೆ 7 ರವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶವಿದ್ದು, ಸಂಜೆ 7 ರಿಂದ ಬೆಳಗ್ಗೆ 6ರವರೆಗೆ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಮುಂದುವರಿಕೆ ಆಗುತ್ತಿದೆ. ಈ ಎಲ್ಲದರ ನಡುವೆ ವರ್ತಕರು ನಿಟ್ಟುಸಿರುವ ಬಿಟ್ಟಿದ್ದು, ಗ್ರಾಹಕರು ನಿರಾಳರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಂಡೆ ಒಡೆಯೋರಿಗೆ ರೈತರ ಕಷ್ಟ ತಿಳಿಯಲ್ಲ: ಛಲವಾದಿ ನಾರಾಯಣಸ್ವಾಮಿ

ವೃಂದಾವನದಲ್ಲಿ ವಾಟರ್ ಕೂಲರ್ ತಾಗಿ ನೋಡುತ್ತಿದ್ದಂತೇ ಪ್ರಾಣ ಕಳೆದುಕೊಂಡ ಯುವಕ: Viral video

ಗೂಂಡಾಗಳ ಬಿಟ್ಟು ರೈತರಿಗೆ ಬೆದರಿಸಬೇಡಿ. ಟೌನ್‍ಶಿಫ್: ರಾಜಕೀಯ ಬೇಳೆ ಬೇಯಿಸಿಕೊಳ್ಳಬೇಡಿ: ಬಿ.ವೈ. ವಿಜಯೇಂದ್ರ

ಸಚಿವ ಸ್ಥಾನಕ್ಕೆ ನನ್ನ ಬೇಡಿಕೆ...: ಮಂತ್ರಿಗಿರಿಗೆ ಬೇಡಿಕೆ ಇಟ್ಟ ಬಗ್ಗೆ ಜಮೀರ್ ಅಹ್ಮದ್ ಶಾಕಿಂಗ್ ಹೇಳಿಕೆ

ಬಡವನಾದರೇನು ಪ್ರಿಯೇ....ಕುಟುಂಬದ ಜೊತೆ ಖುಷಿಯಾಗಿರುವುದನ್ನು ಹೇಳಿಕೊಟ್ಟ ಬಡ ವ್ಯಕ್ತಿ Video

ಮುಂದಿನ ಸುದ್ದಿ
Show comments