Webdunia - Bharat's app for daily news and videos

Install App

ನಿಯಮ ಪಾಲನೆ ಮಾಡಿದ್ರೆ ಮಾತ್ರ ಶಾಲೆಗಳು ಅಧಿಕೃತ

Webdunia
ಶುಕ್ರವಾರ, 9 ಸೆಪ್ಟಂಬರ್ 2022 (10:45 IST)
ಬೆಂಗಳೂರು : ರಾಜ್ಯದಲ್ಲಿ ಇನ್ಮುಂದೆ ಅನಧಿಕೃತ ಖಾಸಗಿ ಶಾಲೆಗಳಿಗೆ  ಬ್ರೇಕ್ ಬೀಳೋದು ಖಚಿತವಾಗಿದೆ.

ಶಿಕ್ಷಣ ಇಲಾಖೆಯಲ್ಲೂ 40 ಪರ್ಸೆಂಟ್ ಕಮಿಷನ್ ಆರೋಪ ಕೇಳಿ ಬಂದ ಬೆನ್ನಲ್ಲೇ ಎಚ್ಚತ್ತ ರಾಜ್ಯ ಸರ್ಕಾರ ಅನಧಿಕೃತ ಶಾಲೆಗಳ ಮೇಲೆ ಪ್ರಹಾರ ನಡೆಸಿದೆ. ಅನಧಿಕೃತ ಖಾಸಗಿ ಶಾಲೆಗಳ ತೆರವಿಗಾಗಿ ಆಪರೇಷನ್ ಕ್ಲೀನ್ ಅಭಿಯಾನ ಪಾರ್ಟ್-2 ಶುರು ಮಾಡಿದೆ.

ಇತ್ತೀಚೆಗಷ್ಟೇ ಅನಧಿಕೃತ ಖಾಸಗಿ ಶಾಲೆಗಳನ್ನು ಪಟ್ಟಿ ಮಾಡಲು ಅಭಿಯಾನ ಶುರು ಮಾಡಿತ್ತು. ಇದೀಗ ಶಿಕ್ಷಣ ಇಲಾಖೆ ರಿಲೀಸ್ ಮಾಡಿರೋ ಮಾನದಂಡಗಳು ಇದ್ರೆ ಮಾತ್ರ ಆ ಶಾಲೆಗಳು ಅಧಿಕೃತ ಎಂದು ಪರಿಗಣಿಸಲಾಗುತ್ತದೆ. ಸರ್ಕಾರದ ನಿಯಮ ಪಾಲನೆ ಮಾಡದೇ ಇರೋ ಶಾಲೆಗಳಿಗೆ ಬೀಗ ಬಿಳೋದು ಖಚಿತವಾಗಿದೆ.

ಯಾವ ಶಾಲೆಗಳು ಅನಧಿಕೃತ ಆಗುತ್ತವೆ?

•             ಕರ್ನಾಟಕ ಶಿಕ್ಷಣ ಕಾಯ್ದೆ 1983ರ ಕಲಂ 30, 31 ಅಡಿ ನೋಂದಣಿ ಪಡೆಯದ ಶಾಲೆಗಳು
•             ಶಾಲಾ ಮಾನ್ಯತೆಯನ್ನು 1 ವರ್ಷಕ್ಕಿಂತ ಹೆಚ್ಚು ನವೀಕರಣ ಮಾಡದಿರುವುದು
•             ಕರ್ನಾಟಕ ಶಿಕ್ಷಣ ಕಾಯ್ದೆ 1983ರ ಕಲಂ 36, ಆರ್ಟಿಇ ಕಾಯ್ದೆ 2009 ಅಡಿಯ ಮಾನ್ಯತೆ ಪಡೆಯದ ಶಾಲೆಗಳು
•             ಪೂರ್ವಾನುಮತಿ ಇಲ್ಲದೆ ಸ್ಥಳಾಂತರ ಮಾಡಿದ ಶಾಲೆಗಳು
•             ಅನಧಿಕೃತವಾಗಿ ಬೇರೆಯವರಿಗೆ ಹಸ್ತಾಂತರ ಮಾಡಿದ ಶಾಲೆಗಳು
•             ಇಲಾಖೆಯಿಂದ ನೋಂದಣಿ ಪಡೆಯದ ಉಪಶಾಲೆಗಳು
•             ಹೆಚ್ಚುವರಿ ತರಗತಿಯನ್ನು ಅನುಮತಿ ಪಡೆಯದೇ ಪ್ರಾರಂಭಿಸಿರುವ ಶಾಲೆಗಳು
•             ಅನುಮತಿ ಪಡೆದ ನಂತರ ಮತ್ತೊಂದು ಮಾಧ್ಯಮದಲ್ಲಿ ಪಠ್ಯ ಬೋಧನೆ ಮಾಡುವುದು
•             ಸರ್ಕಾರ ಅನುಮತಿ ನೀಡಿದ ಪಠ್ಯಕ್ರಮ ಬದಲಾಗಿ ಬೇರೆ ಪಠ್ಯ ಬೋಧನೆ ಮಾಡುವ ಶಾಲೆಗಳು
•             ಶಾಲೆ ಸ್ಥಾಪನೆಗೆ ಅನುಮತಿ ಕೊಟ್ಟ ಜಾಗದಿಂದ ಅನುಮತಿ ಪಡೆಯದೇ ಸ್ಥಳಾಂತರ ಮಾಡಿದ ಶಾಲೆಗಳು
•             ಅನುಮತಿ ಪಡೆಯದೇ ಬೇರೊಂದು ಆಡಳಿತ ಮಂಡಳಿ ನಡೆಸುವುದು
•             ಬೇರೆ ಪಠ್ಯಕ್ರಮದ ಅನುಮತಿ ಪಡೆದ ಬಳಿಕವೂ ರಾಜ್ಯ ಪಠ್ಯಕ್ರಮ ಬೋಧನೆ ಮಾಡುವ ಶಾಲೆಗಳು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಸ್ವಾತಂತ್ರ್ಯಕ್ಕೆ ದಿನಕ್ಕೆ ಪ್ರಧಾನಿ ಮೋದಿ ಏನು ಭಾಷಣ ಮಾಡಬೇಕು, ನೀವೇ ನಿರ್ಧರಿಸಲು ಇಲ್ಲಿದೆ ಅವಕಾಶ

ಅಮೆರಿಕಾಗೆ ತಕ್ಕ ತಿರುಗೇಟು ಕೊಟ್ಟ ಭಾರತ: ಯುದ್ಧ ವಿಮಾನ ಖರೀದಿ ಡೀಲ್ ಕ್ಯಾನ್ಸಲ್

ಮುಂದಿನ ಸುದ್ದಿ
Show comments