Webdunia - Bharat's app for daily news and videos

Install App

ರೈತರು ಬೆಳೆದ ಉತ್ಪನ್ನಗಳಿಗೆ ಸರಿಯಾದ ಬೆಲೆ ದೊರಕಿಸಲು ಸೆಲ್ಕೋ ಶೀತಲ ಘಟಕ

Webdunia
ಗುರುವಾರ, 5 ಆಗಸ್ಟ್ 2021 (09:14 IST)
ಬೆಂಗಳೂರು (ಆ.05): ರೈತರು ಬೆಳೆದ ಉತ್ಪನ್ನಗಳಿಗೆ ಸರಿಯಾದ ಬೆಲೆ ದೊರಕಿಸಿಕೊಡಬೇಕು ಎಂಬ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿರುವ ನಗರದ ಸೆಲ್ಕೋ ಫೌಂಡೇಶನ್ ರಾಜ್ಯದ ಹಲವೆಡೆ ಶೀತಲ ಕೇಂದ್ರ ಘಟಕಗಳನ್ನು ಪ್ರಾರಂಭಿಸುತ್ತಿದೆ. ಹೀಗೂ ಆದಾಯ ಗಳಿಸಬಹುದು ಎಂಬುದನ್ನು ಅನ್ನದಾತರಿಗೆ  ಮನನ ಮಾಡಿಕೊಡಲು ಸೆಲ್ಕೋ ಮುಂದಾಗಿದೆ.

ಹಣ್ಣು ತರಕಾರಿಗಳನ್ನು ಮಾರುಕಟ್ಟೆಗೆ ಸಮಯಕ್ಕೆ ಸರಿಯಾಗಿ ತಲುಪಿಸಲು ಅಸಾಧ್ಯವಾದಾಗ ಬೆಲೆ ಕಡಿಮೆಯಾದಾಗ ಶೇಖರಿಸಿಡಲು ಮೌಲ್ಯವರ್ಧಿತ ಉತ್ತನ್ನಗಳ ತಯಾರಿಕೆಗೆ ಇದರಿಂದ ಅನುಕೂವಾಗಲಿದೆ. ರೈತ  ಉತ್ಪಾದಕ ಸಂಘಗಳಿಗೆ ಶೀತಲಗೃಹ  ಘಟಕಗಳಿಗೆ  ಉಸ್ತುವಾರಿ ವಹಿಸಲಾಗುವುದು. ಇಂತಹ ಘಟಕಗಳ ಸ್ಥಾಪನೆಗೆ ಸರ್ಕಾರ ಸರ್ಕಾರೇತರ ಸಂಸ್ಥೆಗಳೂ ಮುಂದೆ ಬಂದರೆ ರೈತರ ಆದಾಯ ವೃದ್ಧಿಯಾಗಲಿದೆ. ಕೊರೋನಾ ಸಂಕಷ್ಟದಲ್ಲಿ ರೈತರು ತಾವು  ಬೆಳೆದ ಹೂವು ಹಣ್ಣು ತರಕಾರಿಯನ್ನು  ಮಾರಾಟ ಮಾಡಲಾಗದೇ ಸಂಕಷ್ಟ ಅನುಭವಿಸಿದ್ದನ್ನು ನೋಡಿ ಇದಕ್ಕೆ ಪರಿಹಾರ ರೂಪಿಸಬೇಕೆಂಬ ಸಂಕಲ್ಪದಿಂದ ಶೀತಲ ಗೃಹಗಳ ಸ್ಥಾಪನೆಗೆ ಸೆಲ್ಕೋ ಹೆಜ್ಜೆ ಇಟ್ಟಿದೆ. ಬೆಲೆ ಕಡಿಮೆ ಇದ್ದಾಗ ರೈತರು ತಾವು ಬೆಳೆದ ಬೆಳೆಗಳನ್ನು ಶೀತಲ ಗೃಹಗಳಲ್ಲಿಟ್ಟು ನಂತರ ಬೆಲೆ ಸಿಕ್ಕಾಗ ಮಾರಾಟ ಮಾಡಲು ಇದರಿಂದ ಅನುಕೂಲವಾಗಲಿದೆ.
ಐದು ಶೀತಲ ಘಟಕ ಸ್ಥಾಪನೆ : ಸೆಲ್ಕೋ ಫೌಂಡೇಷನ್ಸ್ ರಾಜ್ಯದಲ್ಲಿ  ಒಟ್ಟು 18 ಶೀತಲಗೃಹ ಘಟಕಗಳ ಸ್ಥಾಪನೆಗೆ ಯೋಜನೆ ಹಾಕಿಕೊಂಡಿದ್ದು ಇದೇ ತಿಂಗಳಲ್ಲಿ 5 ಘಟಕಗಳನ್ನು ಆರಂಭಿಸಲು ಸಿದ್ಧತೆ ನಡೆದಿದೆ.
ಮೊದಲಿಗೆ ಬಾಗಲಕೋಟೆ ಜಲ್ಲೆಯ ಘಟಕಕ್ಕೆ ಆ.5ರಂದು ಚಾಲನೆ ನೀಡಲಾಗುವುದು. ಬಳಿಕ ಹಂತಹಂತವಾಗಿ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ದೊಡ್ಡಮಳೂರು, ಬೆಂಗಳೂರು ನಗರದ ಆನೇಕಲ್, ತುಮಕೂರಿನ ಶಿರಾ, ಬರಗೂರು ಮತ್ತು ಗುಬ್ಬಿಯ  ತ್ಯಾಗರ್ತೂರುಗಳಲ್ಲಿ ಘಟಕ ಆರಂಭಿಸಲಿದೆ.
ಪ್ರತೀ ಘಟಕಕ್ಕೆ  13 ಲಕ್ಷ ರುಪಾಯಿ ವೆಚ್ಚವಾಗಲಿದ್ದು 5 ಮೆಟ್ರಿಕ್ ಟನ್ ಸಾಮರ್ಥ್ಯವಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಗಾಂಧೀಜಿ ಬಗ್ಗೆ ತಪ್ಪು ಮಾಹಿತಿ ಕೊಟ್ರಾ ರಾಹುಲ್ ಗಾಂಧಿ: ಲೆಹರ್ ಸಿಂಗ್ ಟ್ವೀಟ್ ನಲ್ಲಿ ಏನಿದೆ ನೋಡಿ

ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಮುಂದಿನ ಸುದ್ದಿ
Show comments