ಬಿಜೆಪಿ , ಜೆಡಿಎಸ್ ಪಕ್ಷಗಳನ್ನು ನಾಯಿಗೆ ಹೋಲಿಸಿದಕ್ಕೆ ಕ್ಷಮೆ ಕೇಳಿದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು

Webdunia
ಮಂಗಳವಾರ, 17 ಏಪ್ರಿಲ್ 2018 (15:54 IST)
ಬೆಂಗಳೂರು : ಇತ್ತೀಚೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಮಾತನಾಡುವ ಭರದಲ್ಲಿ ಬಿಜೆಪಿ , ಜೆಡಿಎಸ್ ಪಕ್ಷಗಳನ್ನು ನಾಯಿಗೆ ಹೋಲಿಸಿ ವಿವಾದ ಸೃಷ್ಟಿಸಿದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರು ಇದೀಗ ತಮ್ಮ ಮಾತಿಗೆ ಕ್ಷಮೆಯಾಚಿಸಿದ್ದಾರೆ.


ಮೈಸೂರಿನ ಸಮಾರಂಭವೊಂದರಲ್ಲಿ ಮಾತಾಡುವಾಗ ಮುಖ್ಯಮಂತ್ರಿ ಚಂದ್ರು ಅವರು ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ನಾಯಿಗಳಿದ್ದಂತೆ ಎಂಬುದಾಗಿ ಹೇಳಿಕೆಯೊಂದನ್ನು ನೀಡಿದ್ದರು. ಈ ಹೇಳಿಕೆಯಿಂದ ಬೇಸರಗೊಂಡ ಶಾಂತಿನಗರ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಡಿ.ಸಿ. ಪ್ರಕಾಶ್ ಮುಖ್ಯಮಂತ್ರಿ ಚಂದ್ರು ವಿರುದ್ಧ ದೊಡ್ಡ ಮಟ್ಟದಲ್ಲಿ ಪ್ರತಿಭಟನೆಗೆ ಮುಂದಾಗಿದ್ದರು.


ಇದರಿಂದ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿರೋದನ್ನು ಗಮನಿಸಿದ ಚಂದ್ರು ಅವರು,’ ನಾನೊಬ್ಬ ಕಲಾವಿದ. ನೂರಾರು ಚಲನಚಿತ್ರ ಮತ್ತು ಧಾರಾವಾಹಿಗಳಲ್ಲಿ ರಂಜಕವಾಗಿ ಮಾತಾಡುವುದೇ ನನ್ನ ಕಸುಬು. ಮನರಂಜನೆಯನ್ನೇ ಪ್ರಧಾನವಾಗಿಟ್ಟುಕೊಂಡು ಮಾತಾಡಿದಾಗ ಯಾರ ಮನ ನೋಯಿಸುವ ಪ್ರಮೇಯವೇ ಇಲ್ಲ. ಮೈಸೂರಿನ ಸಭೆಯಲ್ಲಿ ಎಲ್ಲರೂ ನನ್ನ ಮಾತುಗಳನ್ನು ಕೇಳಿ ನಕ್ಕರೇ ಹೊರತು ಅದನ್ನು ಗಂಭೀರ ಆರೋಪವೆಂದು ಯಾರೂ ಭಾವಿಸಲಿಲ್ಲ. ಆದರೆ ಅದರಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೇಳಲು ನನಗೆ ಯಾವ ಹಿಂಜರಿಕೆಯೂ ಇಲ್ಲ. ನಾಲ್ಕು ದಿನದ ಈ ಬಾಳಿನಲ್ಲಿ ನಕ್ಕು ನಲಿಯುತ್ತಿರಬೇಕೆಂಬುದೇ ನನ್ನ ಆಶಯ’ ಎಂದು ಲಿಖಿತ ರೂಪದಲ್ಲಿ ಕ್ಷಮೆ ಕೇಳಿ ಈ ವಿವಾದಕ್ಕೆ ತೆರೆ ಎಳೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೆಚ್ಚು ಸಮಯ ವಾಹನ ನಿಲ್ಲಿಸುವವರಿಗೆ ಬೀಳುತ್ತೆ ಜೇಬಿಗೆ ಕತ್ತರಿ

ಪಾಕಿಸ್ತಾನದ ಅವಸ್ಥೆಯೇ... ಶ್ರೀಲಂಕಾಗೆ ಅವಧಿ ಮೀರಿದ ಆಹಾರ ಸಾಮಗ್ರಿ ಕಳುಹಿಸಿದ ಪಾಕ್

ಹಿಟ್ಟು ಬೀಸಲೆಂದು ಗಿರಣಿಗೆ ತೆರಳಿದ್ದ ಬಾಲಕಿ ಮೇಲೆ ಗ್ಯಾಂಗ್ ರೇಪ್

ಸಿದ್ದರಾಮಯ್ಯ, ಶಿವಕುಮಾರ್ ಬ್ರೇಕ್‌ಫಾಸ್ಟ್‌ ಮೀಟಿಂಗ್ ಕಥೆ ಬಿಚ್ಚಿಟ್ಟ ಜೆಡಿಎಸ್

ಪೋಕ್ಸೋ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪ ಬಿಗ್ ರಿಲೀಫ್‌

ಮುಂದಿನ ಸುದ್ದಿ
Show comments