ಅಧಿವೇಶನ: ಇಂದಿನಿಂದ ಅಸಲಿ ಆಟ ಶುರು!

Webdunia
ಮಂಗಳವಾರ, 14 ಡಿಸೆಂಬರ್ 2021 (07:33 IST)
ಬೆಳಗಾವಿ : ವರ್ಷಕ್ಕೊಮ್ಮೆ ನಡೆಯುತ್ತಿದ್ದ ಜಾತ್ರೆಯಿಂದ ಕಳೆಗಟ್ಟುತ್ತಿದ್ದ ಕುಂದಾನಗರಿಯಲ್ಲೀಗ ಮೂರು ವರ್ಷಕ್ಕೊಮ್ಮೆ ಬಂದಿರುವ ಜಾತ್ರೆಯಲ್ಲೂ ಅದೇ ಕಳೆ.

ಆದರೆ ಅಬ್ಬರ, ಹಾರಾಟ ಮಾತ್ರ ತುಸು ಕುಗ್ಗಿದೆ. ಸಮಗಾಳಿಗೆ ಸಮ ಎಂಬಂತಹ ಬಿಸಿಲು… ಸಮ ಬಿಸಿಲಿಗೆ ಸಮ ಶೀತ ಎಂಬ ವಾತಾವರಣದಲ್ಲಿ ಮೂರು ವರ್ಷದ ಬಳಿಕ ಬೆಳಗಾವಿ ಸುವರ್ಣಸೌಧದಲ್ಲಿ ವಿಧಾನಮಂಡಲದ ಅಧಿವೇಶನ ಆರಂಭವಾಗಿದೆ.

ಮತಾಂತರದ ನಿಷೇಧ ಕಾಯ್ದೆಯ ಚರ್ಚೆಯ ಬೆಂಕಿಗೆ ಸಚಿವ ಸುನಿಲ್ ಕುಮಾರ್ ಲವ್ ಜಿಹಾದ್ ಎಂಬ ತುಪ್ಪವನ್ನು ಸುರಿಯುವ ಮೂಲಕ ಅಧಿವೇಶನದ ಕಾವಿಗೆ ಚಾಲನೆ ಕೊಟ್ಟಿದ್ದಾರೆ.
ವಿಧಾನಮಂಡಲದಲ್ಲಿ ಇವತ್ತು ಬಹುತೇಕ ಸಮಯ ಸಂತಾಪದ ಸೂಚಕಕ್ಕೆ ಮೀಸಲಾಗಿತ್ತು. ನಟ ಪುನೀತ್ ರಾಜ್ಕುಮಾರ್ ನಮ್ಮನ್ನಗಲಿ ಒಂದೂವರೆ ತಿಂಗಳಾಗ್ತಿದೆ.

ಪುನೀತ್ ಅಪಾರ ಅಭಿಮಾನಿ ಬಳಗ ಇನ್ನೂ ಅರಗಿಸಿಕೊಳ್ಳಲು ಆಗ್ತಿಲ್ಲ. ಈ ನಡುವೆ ಬೆಳಗಾವಿ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಇಂದು ಪುನೀತ್ ಸ್ಮರಣೆ ನಡೆಯಿತು.

ವಿಧಾನಸಭೆಯಲ್ಲಿ ಇವತ್ತು ಮಾಜಿ ರಾಜ್ಯಪಾಲ ರೋಸಯ್ಯ ಸಿಡಿಎಸ್ ಬಿಪಿನ್ ರಾವತ್, ನಟ ಪುನೀತ್, ಶಿವರಾಂ ಸೇರಿದಂತೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿ ನಿರ್ಣಯ ಕೈಗೊಳ್ಳಲಾಯ್ತು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮೋದಿ ವಿದೇಶಕ್ಕೆ ಹೋಗಲ್ವಾ, ರಾಹುಲ್ ಹೋದ್ರೆ ತಪ್ಪೇನು ಎಂದ ಮಲ್ಲಿಕಾರ್ಜುನ ಖರ್ಗೆ: ಯಾಕೆ ಹೋಗ್ತಾರೆ ಎಂದ ನೆಟ್ಟಿಗರು

ಜಾತಿ ಸರ್ಟಿಫಿಕೇಟ್ ಪಡೆಯುವುದು ಹೇಗೆ, ಯಾವ ದಾಖಲೆಗಳು ಬೇಕು ಇಲ್ಲಿದೆ ಮಾಹಿತಿ

ಡಿಕೆ ಶಿವಕುಮಾರ್, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ರಹಸ್ಯ ಮೀಟಿಂಗ್: ನಡೆದಿದ್ದೇನು

ಮುಂದಿನ ಸುದ್ದಿ
Show comments