Webdunia - Bharat's app for daily news and videos

Install App

ವಿದ್ಯುತ್ ಉತ್ಪಾದನೆ ತೀವ್ರ ಕುಸಿತ?

Webdunia
ಶುಕ್ರವಾರ, 22 ಏಪ್ರಿಲ್ 2022 (11:43 IST)
ತೀವ್ರ ಕಲ್ಲಿದ್ದಲಿನ ಕೊರತೆಯಿಂದಾಗಿ ಶನಿವಾರ ಹಾಗೂ ಭಾನುವಾರ ಆರು ಶಾಖೋತ್ಪನ್ನ ವಿದ್ಯುತ್ ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿತ್ತು.
 
ಪರಿಣಾಮ ವಿದ್ಯುತ್ ಪೂರೈಕೆಯಲ್ಲಿ ಸಾಕಷ್ಟುವ್ಯತ್ಯಯವಾಗಿದ್ದು, ರಾಜ್ಯಾದ್ಯಂತ ಕಳೆದ ಎರಡು ದಿನಗಳಿಂದ ತೀವ್ರ ವಿದ್ಯುತ್ ಕಡಿತ ಮಾಡಲಾಗುತ್ತಿದೆ.

ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳಲ್ಲಿನ ಉತ್ಪಾದನೆ 6220 ಮೆ.ವ್ಯಾ.ನಿಂದ 1915 ಮೆ.ವ್ಯಾಗೆ ಕುಸಿದಿದೆ. ಇದೇ ವೇಳೆ, ಬೇಸಿಗೆ ಹಿನ್ನೆಲೆಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗಿದ್ದರೂ, ಒಟ್ಟಾರೆ ಎಲ್ಲ ಮೂಲಗಳಿಂದ ಪೂರೈಕೆ ಆಗುತ್ತಿದ್ದ ವಿದ್ಯುತ್ ನಿತ್ಯದ ಸರಾಸರಿ 14,000 ಮೆ.ವ್ಯಾಟ್ನಿಂದ 11,550 ಮೆ.ವ್ಯಾಟ್ಗೆ (ಗರಿಷ್ಠ) ಶನಿವಾರ ಕುಸಿದಿದೆ.

ಭಾನುವಾರ ಈ ಪ್ರಮಾಣ ಮತ್ತಷ್ಟುಕಡಿಮೆಯಾಗಿ 9,918 ಮೆ.ವ್ಯಾಟ್ಗೆ (ಗರಿಷ್ಠ) ಕುಸಿದಿದೆ. ಪರಿಣಾಮ, ಮಳೆಯ ನೆಪದಲ್ಲಿ ರಾಜ್ಯಾದ್ಯಂತ ತೀವ್ರ ವಿದ್ಯುತ್ ಕಡಿತ ಆರಂಭವಾಗಿದೆ ಎನ್ನಲಾಗಿದೆ.

ಆರ್ಟಿಪಿಎಸ್ನ ಎಂಟು ಘಟಕಗಳಿಗೆ 1,720 ಮೆ.ವ್ಯಾಟ್ ಉತ್ಪಾದನೆ ಸಾಮರ್ಥ್ಯವಿದೆ. ಮೊದಲೇ 5 ಘಟಕಗಳಿಂದ ಮಾತ್ರ ವಿದ್ಯುತ್ ಉತ್ಪಾದನೆಯಾಗುತ್ತಿದ್ದ ಕೇಂದ್ರದಲ್ಲಿ ಶನಿವಾರ ಹಾಗೂ ಭಾನುವಾರ 2, 6 ಮತ್ತು 7ನೇ ಘಟಕವನ್ನು ಕಲ್ಲಿದ್ದಲು ಕೊರತೆಯಿಂದ ಸ್ಥಗಿತಗೊಳಿಸಲಾಗಿತ್ತು. ಪರಿಣಾಮ ಭಾನುವಾರ 454 ಮೆ.ವ್ಯಾಟ್ (ಗರಿಷ್ಠ ಲೋಡ್) ವಿದ್ಯುತ್ ಉತ್ಪಾದನೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments