Webdunia - Bharat's app for daily news and videos

Install App

ಮತ್ತೆ ಅಡುಗೆ ಅನಿಲ ದರ ಹೆಚ್ಚಳದ ಶಾಕ್!

Webdunia
ಬುಧವಾರ, 1 ಸೆಪ್ಟಂಬರ್ 2021 (09:49 IST)
ನವದೆಹಲಿ: ಸಬ್ಸಿಡಿ ರಹಿತ ದ್ರವೀಕೃತ ಪೆಟ್ರೋಲಿಯಂ ಗ್ಯಾಸ್(LPG) ಸಿಲಿಂಡರ್ ಬೆಲೆಯನ್ನು ಬುಧವಾರದಿಂದ (ಸೆಪ್ಟೆಂಬರ್ 1, 2021) ಜಾರಿಗೆ ಬರುವಂತೆ ಪ್ರತಿ ಸಿಲಿಂಡರ್ಗೆ 25 ರೂ. ಹೆಚ್ಚಳ ಮಾಡಲಾಗಿದೆ.

ವಾಣಿಜ್ಯ ಎಲ್ಪಿಜಿ ಸಿಲಿಂಡರ್ನ ಬೆಲೆಯನ್ನು 75 ರೂ.ನಷ್ಟು ಹೆಚ್ಚಿಸಲಾಗಿದೆ. ತುಂಬಿದ 14.2 ಕೆಜಿ ಸಬ್ಸಿಡಿ ರಹಿತ ದ್ರವೀಕೃತ ಪೆಟ್ರೋಲಿಯಂ ಗ್ಯಾಸ್(ಎಲ್ಪಿಜಿ) ಸಿಲಿಂಡರ್ ಈಗ ರಾಷ್ಟ್ರೀಯ ರಾಜಧಾನಿ ದೆಹಲಿಯಲ್ಲಿ 884.50 ರೂ.ಆಗಿದೆ.
ಸಬ್ಸಿಡಿ ರಹಿತ ಎಲ್.ಪಿ.ಜಿ. ಸಿಲಿಂಡರ್ ಬೆಲೆಯನ್ನು ಆಗಸ್ಟ್ 17 ರಿಂದ ಜಾರಿಗೆ ಬರುವಂತೆ ಪ್ರತಿ ಸಿಲಿಂಡರ್ ಗೆ 25 ರೂಪಾಯಿ ಹೆಚ್ಚಿಸಲಾಗಿತ್ತು. ಈ ಹಿಂದೆ ಜುಲೈ 1 ರಂದು ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 25.50 ರೂಪಾಯಿ ಹೆಚ್ಚಳ ಮಾಡಲಾಗಿತ್ತು. ಈಗ ಮತ್ತೆ 25 ರೂ. ಜಾಸ್ತಿಯಾಗಿದೆ.
LPG ಬೆಲೆಗಳು ಕಳೆದ 7 ವರ್ಷಗಳಲ್ಲಿ ದ್ವಿಗುಣಗೊಂಡಿದೆ. 2014 ರ ಮಾರ್ಚ್ 1 ರಂದು ಪ್ರತಿ ಸಿಲಿಂಡರ್ಗೆ 410.50 ರೂ. ಇದ್ದ ಎಲ್ಪಿಜಿ ಸಿಲಿಂಡರ್ ದರ ಈಗ 859.50 ರೂ.ಗಳಷ್ಟು ಆಗಿದೆ.
ಪ್ರಸ್ತುತ, ಸರ್ಕಾರವು ಪ್ರತಿ ವರ್ಷ ಒಂದು ಮನೆಗೆ 12 ಸಬ್ಸಿಡಿ ಎಲ್ಪಿಜಿ ಸಿಲಿಂಡರ್ಗಳನ್ನು ನೀಡುತ್ತದೆ. 12 ಮರುಪೂರಣಗಳ ವಾರ್ಷಿಕ ಕೋಟಾದ ಮೇಲೆ ಸರ್ಕಾರವು ನೀಡುವ ಸಬ್ಸಿಡಿಯ ಮೊತ್ತವು ತಿಂಗಳಿಂದ ತಿಂಗಳಿಗೆ ಬದಲಾಗುತ್ತದೆ.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಾಲ್ತಿಯಲ್ಲಿರುವ ಕಚ್ಚಾ ತೈಲ ಬೆಲೆಗಳು ಮತ್ತು ರೂಪಾಯಿ-ಡಾಲರ್ ವಿನಿಮಯ ದರಗಳ ಮೂಲಕ ದೇಶದಲ್ಲಿ ಎಲ್ಪಿಜಿ ಬೆಲೆಗಳನ್ನು ನಿರ್ಧರಿಸಲಾಗುತ್ತದೆ.
ಸ್ಥಳೀಯ ತೆರಿಗೆಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಅಡುಗೆ ಅನಿಲ ದರಗಳು ಬದಲಾಗುತ್ತವೆ. ಸಾಮಾನ್ಯವಾಗಿ, ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ಮಾಸಿಕ ಆಧಾರದ ಮೇಲೆ ಪರಿಷ್ಕರಿಸಲಾಗುತ್ತದೆ. ಪ್ರತಿ ತಿಂಗಳ ಮೊದಲ ದಿನದಂದು ದರ ಪರಿಷ್ಕರಣೆ ಮಾಡಿ ಜಾರಿಗೆ ತರಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments