Webdunia - Bharat's app for daily news and videos

Install App

ಜನತೆಗೆ ವಿದ್ಯುತ್ ದರ ಏರಿಕೆ ಶಾಕ್!

Webdunia
ಶನಿವಾರ, 22 ಜನವರಿ 2022 (07:51 IST)
ಬೆಂಗಳೂರು : ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಇದೆ. ವಿದ್ಯುತ್ ದರ ಏರಿಕೆಯ ಸುಳಿವನ್ನು ಇಂಧನ ಸಚಿವ ಸುನಿಲ್ ಕುಮಾರ್ ಕೊಟ್ಟಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗ ಶಿಫಾರಸು ಮಾಡಿದರೆ ದರ ಏರಿಕೆ ಮಾಡುವುದು ಅನಿವಾರ್ಯ. ಗ್ರಾಮೀಣಾಭಿವೃದ್ಧಿ ಇಲಾಖೆ, ನೀರಾವರಿ ಇಲಾಖೆ, ಬಿಡಬ್ಲ್ಯೂಎಸ್ಎಸ್ಬಿ ಸೇರಿ ಬೇರೆ ಬೇರೆ ಇಲಾಖೆಗಳಿಂದ 12 ಸಾವಿರ ಕೋಟಿಯಷ್ಟು ಹಣ ಬಾಕಿ ಬರಬೇಕಿದೆ.

ಹೀಗಾಗಿ ವಿದ್ಯುತ್ ದರ ಏರಿಕೆ ಮಾಡುವುದು ಅನಿವಾರ್ಯ. ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗ ಮೊದಲು ದರ ಏರಿಕೆ ಬಗ್ಗೆ ಶಿಫಾರಸು ಮಾಡಲಿ, ನಂತ್ರ ಅದನ್ನು ಪರಿಶೀಲಿಸಿ ವಿದ್ಯುತ್ ದರ ಎಷ್ಟು ಏರಿಕೆ ಮಾಡ್ಬೇಕು ಅಂತಾ ನಿರ್ಧರಿಸುತ್ತೇವೆ ಎಂದರು. 

ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ವಿಚಾರವಾಗಿ ಮಾತನಾಡಿ, ಮುಂದಿನ ವಾರ ದೆಹಲಿಗೆ ಭೇಟಿ ನೀಡುತ್ತೇನೆ. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರೆತ ಬಳಿಕ ಅನುದಾನ ಬಿಡುಗಡೆ ಸರಿಯಾಗಿ ಆಗಿಲ್ಲ. ಈ ಬಗ್ಗೆ ಕೇಂದ್ರದ ಬಳಿ ಚರ್ಚಿಸಿ ಅನುದಾನ ದೊರಕಿಸಲು ಪ್ರಯತ್ನ ಪಡುತ್ತೇನೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments