Webdunia - Bharat's app for daily news and videos

Install App

ರಾಜ್ಯದಲ್ಲಿ ಇಂದು ತುಂತುರು ಮಳೆ

Webdunia
ಭಾನುವಾರ, 21 ನವೆಂಬರ್ 2021 (11:27 IST)
ಬೆಂಗಳೂರಿನಲ್ಲಿ  ಕನಿಷ್ಠ 19, ಗರಿಷ್ಠ 26 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಇದೇ ರೀತಿ ಬುಧವಾರದವರೆಗೂ ಹವಾಮಾನ ಮುಂದುವರಿಯಲಿದೆ.
ಗುರುವಾರ ಮತ್ತು ಶುಕ್ರವಾರ ಬೆಂಗಳೂರಿನಲ್ಲಿ ಒಣ ಹವೆ ಇರಲಿದೆ. ಮತ್ತೆ ಶನಿವಾರ ಮಳೆ ಮುಂದುವರಿಯಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಮಳೆ ಸುರಿಯಲಿದೆ. ಕೆಲವು ಕಡೆ ಗುಡುಗು-ಸಿಡಿಲು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ. ಇಂದು ಬೆಂಗಳೂರಿನ ಕೆಲವು ಭಾಗಗಳಲ್ಲಿ ಕೊಂಚ ಮಳೆಯ ಪ್ರಮಾಣ ಕೊಂಚ ಇಳಿಮುಖವಾಗುವ ಸಾಧ್ಯತೆಗಳಿವೆ. ಇತ್ತ ರಾಜ್ಯದ ಬಹುತೇಕ ಕೆರೆಗಳು  ಭರ್ತಿಯಾಗಿ ಕೋಡಿ ಬಿದ್ದು, ನೀರು ಹರಿಯುತ್ತಿದೆ.  ಇತ್ತ ನಿರಂತರ ಮಳೆ ಹಿನ್ನೆಲೆ ಕೃಷಿ ಭೂಮಿಯಲ್ಲಿ ನೀರು ಶೇಖರಣೆಯಾಗುತ್ತಿರುವ ಕಾರಣ ರೈತರು  ಸಂಕಷ್ಟದಲ್ಲಿ ಸಿಲುಕಿದ್ದಾರೆ.
ಜಲಾಯಶಕ್ಕೆ ಒಳ ಹರಿವು ಹೆಚ್ಚಳವಾದ ಹಿನ್ನಲೆ ತುಂಗಭದ್ರಾ ಜಲಾಶಯದಿಂದ ಒಂದು ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಹಾಗಾಗಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಮಾಹಿತಿ ನೀಡಿದ್ದಾರೆ. ಇತ್ತ ನಿರಂತರ ಮಳೆಯಿಂದಾಗಿ  ರಾಜ್ಯದ ಜಲಾಶಯಗಳು ಭರ್ತಿಯಾಗುತ್ತಿದ್ದು, ನದಿ ಪಾತ್ರದ ಜನರಿಗೆ ಎಚ್ಚರಿಕ ಸಂದೇಶ ನೀಡಲಾಗಿದೆ. ಮುಂದಿನ ಎರಡು ದಿನ ಮೀನುಗಾರಿಕೆ ನಿಷೇಧಿಸಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಮುಂದಿನ ಸುದ್ದಿ
Show comments