Webdunia - Bharat's app for daily news and videos

Install App

ಸಿಎಂ ಪಟ್ಟಕ್ಕೆ ಸಿದ್ದರಾಮಯ್ಯ ಆಯ್ಕೆ

Webdunia
ಬುಧವಾರ, 17 ಮೇ 2023 (13:17 IST)
ಬೆಂಗಳೂರು : ಕರ್ನಾಟಕ ಮುಖ್ಯಮಂತ್ರಿ ಪಟ್ಟ ಯಾರಿಗೆ ಎಂಬ ಪ್ರಶ್ನೆಗೆ ಬಹುತೇಕ ಉತ್ತರ ಸಿಕ್ಕಿದ್ದು, ಸಿದ್ದರಾಮಯ್ಯ ಪಟ್ಟಕ್ಕೇರಲು ದೆಹಲಿಯಲ್ಲಿ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
 
ಸಿದ್ದರಾಮಯ್ಯ ಸಿಎಂ ಆಗುತ್ತಾರೆ ಎಂಬ ಸುದ್ದಿ ಹೊರ ಬೀಳುತ್ತಿದ್ದಂತೆ ಸಿದ್ದರಾಮಯ್ಯ ಬೆಂಬಲಿಗರು ಹಾಗೂ ಅಭಿಮಾನಿಗಳ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ. ಈ ಹಿನ್ನೆಲೆ ಸಿದ್ದರಾಮಯ್ಯ ಮನೆಮುಂದೆ ಭಾರೀ ಜನಸ್ತೋಮ ಸೇರಿದ್ದು, ಸಂಭ್ರಮಾಚರಣೆ ನಡೆಸುತ್ತಿದ್ದಾರೆ.

ರಾಜ್ಯದ ವಿವಿಧೆಡೆಯಿಂದ ಸಿದ್ದರಾಮಯ್ಯ ಬೆಂಬಲಿಗರು ಹಾಗೂ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಆಗಮಿಸಿ ಸಿದ್ದರಾಮಯ್ಯ ಮನೆಮುಂದೆ ಘೋಷಣೆಗಳನ್ನು ಕೂಗುತ್ತಾ ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ವರುಣಾ ಕ್ಷೇತ್ರದಲ್ಲೂ ಸಹಾ ಸಂಭ್ರಮ ಮನೆ ಮಾಡಿದೆ.

ಸಿದ್ದರಾಮಯ್ಯ ಸಿಎಂ ಆಗಲು ಹೈಕಮಾಂಡ್ ಒಪ್ಪಿಗೆ ಸೂಚಿಸಿದ ಹಿನ್ನೆಲೆ ಅವರ ಅಭಿಮಾನಿಗಳು ಕರೆಂಟ್ ಫ್ರೀ, ಬಸ್ನಲ್ಲಿ ಮಹಿಳೆಯರಿಗೆ ಪ್ರಯಾಣ ಫ್ರೀ, ಗೃಹಿಣಿಯರಿಗೆ 2 ಸಾವಿರ ರೂ. ದುಡ್ಡು ಎಂದು ಅನೇಕ ಘೋಷಣೆಗಳನ್ನು ಕೂಗಿ ಸಿದ್ದರಾಮಯ್ಯನವರಿಗೆ ಜೈಕಾರ ಹಾಕಿ ಸಂಭ್ರಮಿಸುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ಏಲ್ಲೆಲ್ಲಿ ಮಳೆ ಸಾಧ್ಯತೆ ಇಲ್ಲಿದೆ ಮಾಹಿತಿ

ಟ್ರಾಫಿಕ್‌ ಫೈನ್‌ ಆಫರ್‌ಗೆ ರಾಜಧಾನಿಯಲ್ಲಿ ಭರ್ಜರಿ ರೆಸ್ಪಾನ್ಸ್‌: ಮೊದಲ ದಿನ ವಸೂಲಿಯಾದ ದಂಡವೆಷ್ಟು ಗೊತ್ತಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ಮುಂದಿನ ಸುದ್ದಿ
Show comments