Webdunia - Bharat's app for daily news and videos

Install App

ಮತ್ತೆ ಟ್ವಿಟರ್ ನಲ್ಲಿ ಆಕ್ಟಿವ್ ಆದರು ಸಿದ್ದರಾಮಯ್ಯ!

Webdunia
ಭಾನುವಾರ, 1 ಜುಲೈ 2018 (09:13 IST)
ಬೆಂಗಳೂರು: ಉಜಿರೆಯ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ 12 ದಿನಗಳ ವಿಶ್ರಾಂತಿ ಪಡೆದು ಹೊಸ ಉತ್ಸಾಹದೊಂದಿಗೆ ಆಗಮಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಟ್ವಿಟರ್ ನಲ್ಲಿ ಸಕ್ರಿಯರಾಗಿದ್ದು, ಎದುರಾಳಿಗಳಿಗೆ ತಿರುಗೇಟು ಕೊಟ್ಟಿದ್ದಾರೆ.

ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿದ್ದಾಗ ಬಜೆಟ್ ಬಗ್ಗೆ ತಮ್ಮ ಆಪ್ತರೊಂದಿಗೆ ಅಸಮಾಧಾನ ವ್ಯಕ್ತಪಡಿಸಿದ್ದ ಸಂಭಾಷಣೆಯ ವಿಡಿಯೋ ವೈರಲ್ ಆಗಿದ್ದರ ಬಗ್ಗೆ ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಕಿಡಿ ಕಾರಿದ್ದಾರೆ.

ಬೆಂಗಳೂರಿಗೆ ಬಂದ ಮೇಲೆ ಪತ್ರಕರ್ತರು ಈ ವಿವಾದದ ಬಗ್ಗೆ ಪ್ರಶ್ನಿಸಿದ್ದಕ್ಕೆ ಸಿದ್ದರಾಮಯ್ಯ ನಾನು ಅಸಮಾಧಾನಗೊಂಡಿದ್ದೇನೆಂದು ನಿಮಗೆ ಯಾರು ಹೇಳಿದ್ದು? ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ ಎಂದಿದ್ದರು. ಇದೇ ಕಾರಣಕ್ಕೆ ಕೆಲವರು ಸಿದ್ದರಾಮಯ್ಯ ಯು ಟರ್ನ್ ತೆಗೆದುಕೊಂಡಿದ್ದಾರೆ ಎಂದಿದ್ದಕ್ಕೆ ತಿರುಗೇಟು ನೀಡಿದ್ದಾರೆ.

‘ನನ್ನ ಖಾಸಗಿ ಸಂಭಾಷಣೆಯ ಎಡಿಟೆಡ್ ವಿಡಿಯೋ ಬಗ್ಗೆ ಶುಕ್ರವಾರದವರೆಗೂ ನಾನು ಪ್ರತಿಕ್ರಿಯಿಸಿರಲೇ ಇಲ್ಲ. ಹೀಗಿರುವಾಗ ಯು ಟರ್ನ್-ಹಿ ಟರ್ನ್ ಪ್ರಶ್ನೆ ಎಲ್ಲಿದೆ? ಅದು ದುರುದ್ದೇಶದಿಂದ ಕೂಡಿದ ಎಡಿಟೆಡ್ ವಿಡಿಯೋ.  ಅದರ ಹಿಂದೆ ಯಾರಿದ್ದಾರೆ ಎನ್ನುವುದನ್ನು ಶೀಘ್ರ ಪತ್ತೆ ಹಚ್ಚಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.

ಅಷ್ಟೇ ಅಲ್ಲ ‘ರಾಜ್ಯದ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಇದನ್ನು ಅಸ್ಥಿರಗೊಳಿಸಲು ಕೆಲವು ಶಕ್ತಿಗಳು ಹಗಲು-ಇರುಳು ಶ್ರಮಿಸುತ್ತಿವೆ. ನನ್ನ ಖಾಸಗಿ ಸಂಭಾಷಣೆಯ ವಿಡಿಯೋದ ಹಿಂದಿನ-ಮುಂದಿನ ಭಾಗಗಳನ್ನು ಕತ್ತರಿಸಿ ಪ್ರಸಾರ ಮಾಡುವುದು ಪತ್ರಿಕಾ ಧರ್ಮವಲ್ಲ. ಇದನ್ನು ನಂಬಿ ಮೈತ್ರಿ ಪಕ್ಷಗಳ ನಾಯಕರು ಪ್ರತಿಕ್ರಿಯಿಸಬಾರದು, ನಿರ್ಲಕ್ಷಿಸಬೇಕು’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಂಗಿಯನ್ನು ಲವ್ ಮಾಡಿದ್ದಕ್ಕೆ ಸಹೋದರರ ಶಿಕ್ಷೆ: 37 ಸೆಕೆಂಡ್ ಗಳಲ್ಲಿ 83 ಬಾರಿ ಇರಿತ: ಭೀಕರ ದೃಶ್ಯ ವೈರಲ್ Video

ಸೋಶಿಯಲ್ ಮೀಡಿಯಾ ಪವರ್ ಇದು… ಬಡತನದಿಂದಾಗಿ ಒಂಟಿ ಕಾಲಿನಲ್ಲಿ ಒದ್ದಾಡುತ್ತಿದ್ದ ಬಾಲಕಿಗೆ ಕೊನೆಗೂ ಸಿಕ್ತು ಸಹಾಯ Video

ನಾನು ಬ್ರಹ್ಮಚಾರಿ ಎಂದು ಯುವತಿಯೊಂದಿಗೆ ಲಲ್ಲೆ ಹೊಡೆಯುತ್ತಿದ್ದ ಪತಿ: ಪತ್ನಿ ಎಂಟ್ರಿ ಹೊಡೆಯುತ್ತಿದ್ದ ಹಾಗೇ ಏನಾಯ್ತು video

ಭಾರತದಲ್ಲಿ ಯಾಕೆ ಹೆಂಗಸರು ಗಂಡು ಮಗುವೇ ಬೇಕೆಂದು ಆಸೆ ಪಡುತ್ತಾರೆ ಗೊತ್ತಿಲ್ಲ: ಡಿಕೆ ಶಿವಕುಮಾರ್

ಕುಮಾರಸ್ವಾಮಿ, ಜನಾರ್ಧನ ರೆಡ್ಡಿ, ರೇಣುಕಾಚಾರ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯ ಸರ್ಕಾರ ಕೌಂಟರ್ ಪ್ಲ್ಯಾನ್

ಮುಂದಿನ ಸುದ್ದಿ
Show comments