Publish Date: Fri, 10 Aug 2018 (09:30 IST)
Updated Date: Fri, 10 Aug 2018 (09:31 IST)
ಬೆಂಗಳೂರು: ಆಗಾಗ ಕೆಲವು ಕಾಂಗ್ರೆಸ್ ಶಾಸಕರು ನಮ್ಮ ಸಂಪಕರ್ದಲ್ಲಿದ್ದಾರೆ ಎಂದು ಶಾಕ್ ನೀಡುವ ಬಿಜೆಪಿಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.
ಬಿಜೆಪಿಗೆ ಹೇಗಾದರೂ ಮಾಡಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬರಲು ಯತ್ನಿಸುತ್ತಿದೆ. ಅದಕ್ಕಾಗಿ ಇಂತಹ ಕುತಂತ್ರ ಮಾಡುತ್ತಿರುತ್ತಾರೆ. ಒಮ್ಮೆ ಹೀಗೆ ಮಾಡಿ ಮುಖಭಂಗ ಅನುಭವಿಸುತ್ತಿದ್ದಾರೆ. ಈಗ ಮತ್ತೆ ಅದೇ ಕೆಲಸ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.
ಅಷ್ಟೇ ಅಲ್ಲ, ಬಿಜೆಪಿಯವರು ಈ ರೀತಿ ಮಾಡಿಯೂ ಎಷ್ಟು ದಿನ ಅದಿಕಾರದಲ್ಲಿದ್ರು? ಅದೆಲ್ಲಾ ಬಿಡಿ ಕೆಲವು ಬಿಜೆಪಿ ಶಾಸಕರೇ ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಶಾಕ್ ಕೊಟ್ಟಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.