Webdunia - Bharat's app for daily news and videos

Install App

ರಫೇಲ್ ಡೀಲ್ ಬಗ್ಗೆ ಸಿದ್ದರಾಮಯ್ಯ ಕೇಂದ್ರವನ್ನು ಟೀಕಿಸಿದ್ದು ಹೀಗೆ!

Webdunia
ಭಾನುವಾರ, 23 ಸೆಪ್ಟಂಬರ್ 2018 (09:53 IST)
ಬೆಂಗಳೂರು: ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂಬ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಕ್ಕೆ ಇದೀಗ ರಾಜ್ಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಕೂಡಾ ಧ್ವನಿಗೂಡಿಸಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ಕಳೆದ ಕೆಲವು ತಿಂಗಳಿನಿಂದ ರಾಹುಲ್ ಗಾಂಧಿ ರಫೇಲ್ ಡೀಲ್ ವಿಚಾರವಾಗಿ ಆರೋಪಗಳ ಸುರಿಮಳೆಯನ್ನೇ ಸುರಿಸುತ್ತಿದ್ದಾರೆ. ಇದೀಗ ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ಬಿಜೆಪಿಯ ಅಜೆಂಡಾ ಏನು? ರಿಲಯನ್ಸ್ ಸಂಸ್ಥೆಗೆ ಏನೂ ಅನುಭವವಿಲ್ಲದಿದ್ದರೂ ರಫೇಲ್ ಡೀಲ್ ಮಾಡಿ ಕೊಡುವ ಮೂಲಕ ನರೇಂದ್ರ ಮೋದಿ ಫ್ರಾನ್ಸ್ ಜತೆಗೆ ತೆರೆಮರೆಯ ಒಪ್ಪಂದ ನಡೆಸಿದ್ದಾರೆ. ಇದು ನಮ್ಮ ರಾಜ್ಯಗಳ ಕಂಪನಿಗಳು ಮತ್ತು ಸೈನಿಕರ ಮನೋಸ್ಥೈರ್ಯ ಕೆಡವಿದಂತೆ. ರಫೇಲ್ ಹಗರಣದಿಂದಾಗಿ ಸೈನಿಕರ ಜೀವಕ್ಕೆ ಅಪಾಯ ಎದುರಾಗಿದೆ ಮತ್ತು ಭ್ರಷ್ಟಾಚಾರದ ಭಯ ಕಾಡಿದೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಜತೆಗೆ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿರುವ ಕರ್ನಾಟಕ ಬಿಜೆಪಿಯಿಂದಾಗಿ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮತ್ತು ಕರ್ನಾಟಕದ ಅಭಿವೃದ್ಧಿಗೆ ತೊಂದರೆಯಾಗಿದೆ ಎಂದೂ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments