Webdunia - Bharat's app for daily news and videos

Install App

ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಮತ್ತೊಂದು ಸುತ್ತಿನ ಫೈಟ್ ಶುರುವಾಗುತ್ತಾ?

Webdunia
ಗುರುವಾರ, 2 ಆಗಸ್ಟ್ 2018 (09:26 IST)
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರ ಮತ್ತೊಂದು ಸುತ್ತಿನ ಸಂಪುಟ ಪುನರಾಚನೆ, ಲೋಕಸಭೆ ಚುನಾವಣೆ ಪ್ರಕ್ರಿಯೆ ವಿಚಾರಕ್ಕೆ ಸಂಬಂಧಿಸಿದಂತೆ ಹೊಸ ಯೋಜನೆಗಳಿಗೆ ಸಿದ್ಧವಾಗುತ್ತಿದ್ದಂತೆ ಮತ್ತೊಂದು ಸುತ್ತಿನ ಅತೃಪ್ತಿಯ ಹೊಗೆಯೂ ಏಳುವ ಲಕ್ಷಣ ಕಾಣುತ್ತಿದೆ.

ಒಂದೆಡೆ ಉಸ್ತುವಾರಿ ಖಾತೆ ಹಂಚಿಕೆ ನಡೆಯುತ್ತಿದ್ದರೆ, ಇನ್ನೊಂದೆಡೆ ಲೋಕಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯರನ್ನು ಕಣಕ್ಕಿಳಿಸಿ ರಾಷ್ಟ್ರ ರಾಜಕಾರಣಕ್ಕೆ ಕಳುಹಿಸುವ ಯೋಜನೆ ಕಾಂಗ್ರೆಸ್ ನಲ್ಲಿ ನಡೆಯುತ್ತಿದೆ.

ಇದು ಸಿದ್ದರಾಮಯ್ಯ ಆಪ್ತರ ಅಸಮಾಧಾನಕ್ಕೆ ಕಾರಣವಾಗಬಹುದು ಎನ್ನಲಾಗಿದೆ. ಸಿದ್ದರಾಮಯ್ಯರನ್ನು ರಾಷ್ಟ್ರ ರಾಜಕಾರಣಕ್ಕೆ ಕಳುಹಿಸಿದರೆ ರಾಜ್ಯದಲ್ಲಿ ತಮ್ಮ ಪ್ರಭಾವ ಕಡಿಮೆಯಾಗಬಹುದು ಎಂಬ ಆತಂಕ ಆಪ್ತರಲ್ಲಿದೆ.

ಇನ್ನೊಂದೆಡೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಸಿದ್ದರಾಮಯ್ಯ ಆಪ್ತರು ಉಸ್ತುವಾರಿ ಖಾತೆಯಾದರೂ ಸಿಗಬಹುದು ಎಂಬ ಕನಸಿನಲ್ಲಿದ್ದಾರೆ. ಒಂದು ವೇಳೆ ತಮಗೆ ಬೇಕಾದಂತೆ ಉಸ್ತುವಾರಿ ಖಾತೆಯೂ ಸಿಗದೇ ಇದ್ದಾಗ ಅತೃಪ್ತಿ ಮತ್ತಷ್ಟು ಜೋರಾಗುವ ಸಾಧ್ಯತೆಯಿದೆ. ಇದರ ಜತೆಗೆ ಆಷಾಢ ಮುಗಿದ ಬಳಿಕ ಸಚಿವ ಸಂಪುಟ ವಿಸ್ತರಣೆಯೂ ನಡೆಯಲಿದ್ದು, ಮತ್ತೊಂದು ಸುತ್ತಿನ ಹಗ್ಗ ಜಗ್ಗಾಟಕ್ಕೆ ವೇದಿಕೆ ಸಿದ್ಧವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments