ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಮತ್ತೊಂದು ಸುತ್ತಿನ ಫೈಟ್ ಶುರುವಾಗುತ್ತಾ?

Webdunia
ಗುರುವಾರ, 2 ಆಗಸ್ಟ್ 2018 (09:26 IST)
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರ ಮತ್ತೊಂದು ಸುತ್ತಿನ ಸಂಪುಟ ಪುನರಾಚನೆ, ಲೋಕಸಭೆ ಚುನಾವಣೆ ಪ್ರಕ್ರಿಯೆ ವಿಚಾರಕ್ಕೆ ಸಂಬಂಧಿಸಿದಂತೆ ಹೊಸ ಯೋಜನೆಗಳಿಗೆ ಸಿದ್ಧವಾಗುತ್ತಿದ್ದಂತೆ ಮತ್ತೊಂದು ಸುತ್ತಿನ ಅತೃಪ್ತಿಯ ಹೊಗೆಯೂ ಏಳುವ ಲಕ್ಷಣ ಕಾಣುತ್ತಿದೆ.

ಒಂದೆಡೆ ಉಸ್ತುವಾರಿ ಖಾತೆ ಹಂಚಿಕೆ ನಡೆಯುತ್ತಿದ್ದರೆ, ಇನ್ನೊಂದೆಡೆ ಲೋಕಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯರನ್ನು ಕಣಕ್ಕಿಳಿಸಿ ರಾಷ್ಟ್ರ ರಾಜಕಾರಣಕ್ಕೆ ಕಳುಹಿಸುವ ಯೋಜನೆ ಕಾಂಗ್ರೆಸ್ ನಲ್ಲಿ ನಡೆಯುತ್ತಿದೆ.

ಇದು ಸಿದ್ದರಾಮಯ್ಯ ಆಪ್ತರ ಅಸಮಾಧಾನಕ್ಕೆ ಕಾರಣವಾಗಬಹುದು ಎನ್ನಲಾಗಿದೆ. ಸಿದ್ದರಾಮಯ್ಯರನ್ನು ರಾಷ್ಟ್ರ ರಾಜಕಾರಣಕ್ಕೆ ಕಳುಹಿಸಿದರೆ ರಾಜ್ಯದಲ್ಲಿ ತಮ್ಮ ಪ್ರಭಾವ ಕಡಿಮೆಯಾಗಬಹುದು ಎಂಬ ಆತಂಕ ಆಪ್ತರಲ್ಲಿದೆ.

ಇನ್ನೊಂದೆಡೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಸಿದ್ದರಾಮಯ್ಯ ಆಪ್ತರು ಉಸ್ತುವಾರಿ ಖಾತೆಯಾದರೂ ಸಿಗಬಹುದು ಎಂಬ ಕನಸಿನಲ್ಲಿದ್ದಾರೆ. ಒಂದು ವೇಳೆ ತಮಗೆ ಬೇಕಾದಂತೆ ಉಸ್ತುವಾರಿ ಖಾತೆಯೂ ಸಿಗದೇ ಇದ್ದಾಗ ಅತೃಪ್ತಿ ಮತ್ತಷ್ಟು ಜೋರಾಗುವ ಸಾಧ್ಯತೆಯಿದೆ. ಇದರ ಜತೆಗೆ ಆಷಾಢ ಮುಗಿದ ಬಳಿಕ ಸಚಿವ ಸಂಪುಟ ವಿಸ್ತರಣೆಯೂ ನಡೆಯಲಿದ್ದು, ಮತ್ತೊಂದು ಸುತ್ತಿನ ಹಗ್ಗ ಜಗ್ಗಾಟಕ್ಕೆ ವೇದಿಕೆ ಸಿದ್ಧವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ವಿದೇಶದಲ್ಲಿ ಕುಟುಂಬವನ್ನು ಹೊಂದಿದ್ದಾರಾ, ಹರಿದಾಡುತ್ತಿರುವ ವಿಡಿಯೋ ಹಿಂದಿನ ಅಸಲಿಯತ್ತೇನು

ಮಂತ್ರಾಲಯ, ರಸ್ತೆ ಅಪಘಾತದಲ್ಲಿ ಮಂಗಳೂರು ಹಾಪ್‌ಕಾಮ್ಸ್‌ನ ರವಿ ಶೆಟ್ಟಿ ನಿಧನ

ಸಿಕ್ಕಿಂ: ನಿರ್ಮಾಣ ಹಂತದ ಸುರಂಗ ಕುಸಿದು 8 ಮಂದಿ ಕಾರ್ಮಿಕರು ಸಾವು

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡ್ತಾರೆ, ರಾಕ್ಷಸರು: ಸಚಿವ ಧರ್ಮೇಂದ್ರ ಪ್ರಧಾನ್ ಮುಂದೆಯೇ ರೇಣುಕಾ ಚೌಧರಿ ವಾಗ್ದಾಳಿ Video

ಆಡಳಿತಾಧಿಕಾರಿ ಜೊತೆ ಕಾರಿನಲ್ಲಿದ್ದ ಪತ್ನಿ: ರಸ್ತೆಯಲ್ಲೇ ಹೈಡ್ರಾಮಾ ಮಾಡಿದ ಪತಿ Video

ಮುಂದಿನ ಸುದ್ದಿ
Show comments