Webdunia - Bharat's app for daily news and videos

Install App

ಸ್ತಬ್ದಚಿತ್ರ ಆಯ್ಕೆ: ಇದರ ವಿಶೇಷತೆ ಏನು?

Webdunia
ಭಾನುವಾರ, 16 ಜನವರಿ 2022 (12:48 IST)
ಬೆಂಗಳೂರು : ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಆಯ್ಕೆಯಾಗಿದೆ.
 
ಪರಮಪೂಜ್ಯರಾದ ಬ್ರಹ್ಮರ್ಷಿ ನಾರಾಯಣ ಗುರುಗಳ ಚಿತ್ರವಿದ್ದ ಸ್ತಬ್ಧಚಿತ್ರವನ್ನು ಕೇಂದ್ರದ ಗಣರಾಜ್ಯೋತ್ಸವ ಸಮಿತಿ ತಿರಸ್ಕರಿಸಿರುವುದು ಅತ್ಯಂತ ಖಂಡನೀಯ ಹಾಗೂ ನಮ್ಮ ನೆಲದ ನಂಬಿಕೆಗಳಿಗೆ ಮಾಡಿರುವ ಅಪಮಾನ.

ಸ್ತ್ರೀ ಸಮಾನತೆಯನ್ನು ಪ್ರತಿಪಾದಿಸಿ ಜಾತಿ, ಮತಭೇದಗಳನ್ನು ಧಿಕ್ಕರಿಸಿ ಸಮಾಜೋದ್ಧಾರಕ್ಕೆ ಶ್ರಮಿಸಿದ ಮಹಾನ್ ಚೇತನ ಶ್ರೀ ನಾರಾಯಣ ಗುರುಗಳು. “ಮನುಷ್ಯರೆಲ್ಲ ಒಂದೇ ಎಂದು ಹೇಳಿ ಒಂದೇ ಜಾತಿ, ಒಂದೇ ಮತ, ಒಬ್ಬರೇ ದೇವರು” ಎಂದು ಸಾರಿ ಆತ್ಮದಲ್ಲಿ ಅರಿವಿನ ಬೆಳಕು ಮೂಡಿಸಿದವರು.

ಅಂಥವರ ಚಿತ್ರವಿದ್ದ ಸ್ತಬ್ಧಚಿತ್ರವನ್ನು ತಿರಸ್ಕಾರ ಮಾಡಿರುವುದು ಕ್ಷಮಾರ್ಹವಲ್ಲದ ತಪ್ಪು ಹಾಗೂ ಭಾರತೀಯ ಸುಧಾರಣಾ ಪರಂಪರೆಯ ಬಗ್ಗೆ ತಿಳಿವಳಿಕೆ ಇಲ್ಲದ ಅಜ್ಞಾನದ ಪರಮಾವಧಿ. ಆಯ್ಕೆ ಸಮಿತಿಯಲ್ಲಿ ಇಂಥ ಅಜ್ಞಾನಿಗಳಿರುವುದು ದೇಶಕ್ಕೆ ಶೋಭೆಯಲ್ಲ.

ಕೂಡಲೇ ನಾರಾಯಣ ಗುರುಗಳ ಚಿತ್ರವಿರುವ ಸ್ತಬ್ಧಚಿತ್ರವನ್ನು ಗಣರಾಜ್ಯೋತ್ಸವದ ಪರೇಡ್ʼಗೆ ಸಮಿತಿಯು ಅಂಗೀಕಾರ ಮಾಡಬೇಕು. ಕೂಡಲೇ ಸಂಬಂಧಪಟ್ಟ ಕೇಂದ್ರದ ಸಚಿವಾಲಯ ಮತ್ತು ಅಧಿಕಾರಿಗಳು ಈ ಅಚಾತುರ್ಯವನ್ನು ಸರಿ ಮಾಡಬೇಕು ಎಂದು ಒತ್ತಾಯ ಮಾಡುತ್ತೇನೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿ ಆಗ್ರಹ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮ್ಮ-ಅಪ್ಪನನ್ನು ಒಂಟಿಯಾಗಿ ಬಿಡಬೇಡ, ಸಾವಿಗೂ ಮುನ್ನಾ ಸಹೋದರಿಗೆ ಸಂದೇಶ ಕಳುಹಿಸಿದ ಸಹೋದರ

ಬಿ ನಾಗೇಂದ್ರ ರಾಜೀನಾಮೆ: ಸಮಗ್ರ ದಲಿತ ಸಮುದಾಯಕ್ಕೆ ಸಿಕ್ಕ ಗೆಲುವು: ಆರ್‌ ಅಶೋಕ್‌

ಕಾಸರಗೋಡಿನಲ್ಲಿ ಓಣಂ ಆಚರಣೆಯ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ನೀವು ಕೆಲಸ ಮಾಡೋದು MLAಗಾಗಿನಾ, ಜನರಿಗಾಗಿನಾ: ಅಧಿಕಾರಿಗೆ ಹೆಚ್‌ಡಿ ಕುಮಾರಸ್ವಾಮಿ ತರಾಟೆ, Video

ಪ್ರವಾಹಕ್ಕೆ ನಲುಗಿದ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ