ಗುಡುಗು ಸಹಿತ ಭಾರೀ ಮಳೆಗೆ ಸಿಲಿಕಾನ್ ಸಿಟಿ ತತ್ತರ!

Webdunia
ಬುಧವಾರ, 18 ಮೇ 2022 (08:08 IST)
ಬೆಂಗಳೂರು : ಭಾರೀ ಮಳೆಗೆ ಸಿಲಿಕಾನ್ ಸಿಟಿ ನಲುಗಿಹೋಗಿದೆ. ಇದೇನು ಕೆರೆಯೋ ಎನ್ನುವಂತೆ ರಸ್ತೆಗಳು ಭಾಸವಾಗುತ್ತಿವೆ.

ರಾಜ್ಕುಮಾರ್ ರಸ್ತೆಯಲ್ಲಿ ಮಂಡಿಯುದ್ದ ನೀರು ನಿಂತಿದ್ದು, ವಾಹನ ಸವಾರರು ರಸ್ತೆ ದಾಟಲು ಹರಸಾಹಸ ಪಡುತ್ತಿದ್ದಾರೆ. ದ್ವಿಚಕ್ರ ವಾಹನಗಳು ಕೆಟ್ಟು ನಿಂತಿವೆ. ಸಾರ್ವಜನಿಕರು ಬಿಬಿಎಂಪಿಯ ಕೆಲಸಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ ಮತ್ತೆ ಮಳೆ ಆರಂಭವಾಗಿದ್ದು, ಗಂಟೆಯಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಮಲ್ಲೇಶ್ವರಂ, ರಾಜಾಜಿನಗರ, ಮಹಾಲಕ್ಷ್ಮಿ ಲೇಔಟ್ ಸುತ್ತಮುತ್ತ ಭಾರೀ ಮಳೆ ಸುರಿದಿದೆ. ಮಧ್ಯಾಹ್ನ ಕೂಡ ಧಾರಾಕಾರ ಮಳೆಯಾಗಿತ್ತು. 

ಬೆಂಗಳೂರಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಬೆಳಗ್ಗೆಯಿಂದ ಮೋಡಕವಿದ ವಾತಾವರಣವಿತ್ತು. ಆಗಾಗ ಕೇಲವೆಡೆ ತುಂತುರು ಮಳೆಯಾಗಿದ್ದು, ಇದೀಗ ಮಳೆಯ ಅಬ್ಬರ ಜೋರಾಗಿದೆ. ಮೆಜೆಸ್ಟಿಕ್, ಮಾರ್ಕೆಟ್, ಮಲ್ಲೇಶ್ವರಂ, ಚಾಮರಾಜಪೇಟೆ, ಶೇಷಾದ್ರಿಪುರಂ, ಸದಾಶಿವನಗರ, ಕೆಜಿ ರೋಡ್, ಸೇರಿದಂತೆ ಹಲವೆಡೆ ಭಾರೀ ಮಳೆ ಸುರಿದಿದೆ. ಶಾಂತಿನಗರ, ಡಬಲ್ ರೋಡ್ನಲ್ಲಿ ಪ್ರವಾಹಸ್ಥಿತಿ ಉಂಟಾಗಿದೆ. 

ಬೆಂಗಳೂರಿನ ಎಲ್ಲೆಡೆ ಗುಡುಗು-ಸಿಡಿಲಿನೊಂದಿಗೆ ಮಳೆ ಅಬ್ಬರಿಸುತ್ತಿದ್ದು, ತಗ್ಗು ಪ್ರದೇಶಗಳು, ಅಂಡರ್ ಪಾಸ್ಗಳು ಜಲಾವೃತಗೊಂಡಿವೆ. ಕೆರೆಯಂತಾಗಿರುವ ರಸ್ತೆಗಳಲ್ಲಿ ದ್ವಿಚಕ್ರ ವಾಹನಗಳು ಹಾಗೂ ಆಟೋ ರಿಕ್ಷಾಗಳು ಕೆಟ್ಟು ನಿಂತಿವೆ. ನಗರದಲ್ಲಿ ಎರಡು ಕಾರುಗಳು ನೀರಿನಲ್ಲಿ ತೇಲಾಡಿದ್ದು, ಕೆಟ್ಟು ನಿಂತ ವಾಹನಗಳಿಂದಾಗಿ ಸವಾರರು ಪರದಾಡುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನವಿಲ್ಲ, ವಜ್ರವಿಲ್ಲ: ಕೇರಳದ ವಧುವೊಬ್ಬಳು ಚಿನ್ನಾಭರಣವಿಲ್ಲದ ಲುಕ್‌ ದೇಶದೆಲ್ಲೆಡೆ ಸದ್ದು

ಮಾಸ್ಕ್ ಹಾಕಿಕೊಂಡು ಬಿಎಂಟಿಸಿ ಏರಿದ ಸಚಿವ ಬೈರತಿ ಸುರೇಶ್: ಚಿಲ್ರೆ ಇಲ್ಲ ಎಂದರೆ ಸಚಿವರನ್ನೇ ಬಸ್ ನಿಂದ ಕೆಳಿಗಿಳಿಸೋದಾ Video

Video: ಹೀಗಾದ್ರೆ ಡೆಲಿವರಿ ಬಾಯ್ಸ್‌ಗೆ ಡೋರ್ ಓಪನ್ ಮಾಡುವುದು ಹೇಗೆ, ತನಗಾದ ಕೆಟ್ಟ ಅನುಭವ ಬಿಚ್ಚಿಟ್ಟ ಯುವತಿ

Karnataka Weather: ನಿರಂತರ ಮಳೆಯಾಗಿರುವ ಕರಾವಳಿ ಭಾಗದಲ್ಲಿ ಇಂದು ಹೇಗಿರಲಿದೆ ಗೊತ್ತಾ ಹವಾಮಾನ

ಎಸ್‌ ಜಾನಕಿ ಪ್ರತಿ ಮಲಯಾಳಿ ಮನೆಯ ಸದಸ್ಯರಾಗಿದ್ದಾರೆ: ಕೇರಳ ಸಿಎಂ ವಿಡಿ ಸತೀಶನ್‌

ಮುಂದಿನ ಸುದ್ದಿ
Show comments