ಗಗನಕ್ಕೇರಿದ ಹೂ, ಅಗತ್ಯ ವಸ್ತುಗಳ ಬೆಲೆ

Webdunia
ಸೋಮವಾರ, 3 ಅಕ್ಟೋಬರ್ 2022 (06:33 IST)
ಬೆಂಗಳೂರು : ದಸರಾ ಮತ್ತು ಆಯುಧಪೂಜೆ ಹಿನ್ನೆಲೆ ನಗರದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಹಬ್ಬದ ಹಿನ್ನೆಲೆ ನಾಳೆ ನಾಡಿದ್ದು ಇನ್ನಷ್ಟು ದರ ಏರಿಕೆ ಸಾಧ್ಯತೆ ಇದ್ದು, ಇಂದೇ ಜನ ಖರೀದಿಗೆ ಮುಂದಾಗಿದ್ದಾರೆ.

ಹಬ್ಬದ ದಿನಗಳು ಹತ್ತಿರ ಬಂದರೆ ಸಾಕು ಜನಸಾಮಾನ್ಯರ ಜೇಬಿಗೆ ಹೊರೆ ಬೀಳುವುದು ಸಾಮಾನ್ಯ. ಕಾರಣ ಅಗತ್ಯ ವಸ್ತುಗಳ ಖರೀದಿ ಹೆಚ್ಚಾಗುವ ಕಾರಣ ಇತರೆ ದಿನಗಳಿಗೆ ಹೋಲಿಕೆ ಮಾಡಿದರೆ ಹಬ್ಬದ ದಿನಗಳಲ್ಲಿ ಬೆಲೆ ಹೆಚ್ಚಾಗುತ್ತಲೇ ಇರುತ್ತದೆ.
ಅದರಂತೆ ಈ ಬಾರಿಯ ಆಯುಧಪೂಜೆ ದಸರಾಗೂ ದರ ಏರಿಕೆಯಾಗಿದ್ದು, ಹಬ್ಬಕ್ಕೆ ಎರಡು ದಿನ ಮುನ್ನವೆ ಖರೀದಿ ಕೂಡ ಜೋರಾಗಿದೆ. 

ಈ ಬಾರಿ ಆಯುಧಪೂಜೆಗೆ ಕೇವಲ ಎರಡು ದಿನ ಮಾತ್ರ ಬಾಕಿ ಇದೆ. ಸಾಮಾನ್ಯವಾಗಿ ಆಯುಧಪೂಜೆ ಸಂದರ್ಭದಲ್ಲಿ ವಾಹನಗಳು, ಯಂತ್ರಗಳಿಗೆ ಹೂವಿನ ಅಲಂಕಾರದ ಜೊತೆಗೆ, ಪೂಜೆ ಪುನಾಸ್ಕಾರಗಳು ಜೋರಾಗಿಯೇ ಮಾಡುವುದರಿಂದ ಹೂ ಸೇರಿದಂತೆ ಕೆಲ ಅಗತ್ಯ ವಸ್ತುಗಳ ದರ ದುಪ್ಪಟ್ಟಾಗಿದೆ.

ಹೂವಿನ ಬೆಲೆ ಕೆಜಿಗೆ ಎಷ್ಟು?

ಮಲ್ಲಿಗೆ ಹೂ – 1000 ಸಾವಿರ ರೂ.
ಸೇವಂತಿಗೆ – 300-500  ರೂ.
ಚೆಂಡು ಹೂ – 150 ರೂ .
ಕನಕಾಂಬರ – 3 ಸಾವಿರ
ಸುಗಂಧರಾಜ – 400 ರೂ.
ಕಾಕಡ – 700-800 ರೂ.

ಕೇವಲ ಹೂ ಮಾತ್ರ ಅಲ್ಲ. ಈ ಹಬ್ಬಕ್ಕೆ ಬೇಕಾದ ಮತ್ತೊಂದು ಅಗತ್ಯ ವಸ್ತು ಅಂದರೆ ಕುಂಬಳಕಾಯಿ ಹಾಗೂ ಬಾಳೆ ಕಂಬ. ಇವುಗಳ ಬೆಲೆ ಕೂಡ ಡಬಲ್ ಆಗಿದೆ. ತಮಿಳುನಾಡು, ಆಂಧ್ರದಿಂದ ನಗರಕ್ಕೆ ಆಗಮಿಸಿರುವ ಕುಂಬಳಕಾಯಿ ಕೆ.ಜಿಗೆ 35 ರಿಂದ 40 ರೂ. ಗೆ ಏರಿಕೆ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಲಕಿಯರ ಶಾಲೆಯ ಮೇಲೆ ಇಸ್ರೇಲಿ-ಯುಎಸ್ ದಾಳಿ, ಸಾವನ್ನಪ್ಪಿದವರ ಸಂಖ್ಯೆ ಕೇಳಿದ್ರೆ ಶಾಕ್‌

ಆಂಧ್ರಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 20 ಸಾವು

ಮೆಜೆಸ್ಟಿಕ್‌ನಿಂದ ಕತ್ರಿಗುಪ್ಪೆಗೆ ₹700, ಆಟೋ ಚಾಲಕರ ಡಿಮ್ಯಾಂಡ್‌ಗೆ ಮಹಿಳೆ ಖಡಕ್ ಕೌಂಟರ್‌, Video

ಇರಾನ್ ಮೇಲೆ ಇಸ್ರೇಲ್, ಯುಎಸ್‌ ದಾಳಿ ಬೆನ್ನಲ್ಲೇ ಟೆಹ್ರಾನ್‌ನಲ್ಲಿರುವ ಭಾರತೀಯರಿಗೆ ಮಾರ್ಗಸೂಚಿ

ರಸ್ತೆಯಲ್ಲಿ ಚೆಲ್ಲಿದ ಮದ್ಯವನ್ನು ನೋಡಕ್ಕಾಗದೆ ಕುಡುಕನೊಬ್ಬ ಏನ್ ಮಾಡಿದ ನೋಡಿ, Video

ಮುಂದಿನ ಸುದ್ದಿ
Show comments