ಗಗನಕ್ಕೇರಿದ ಹೂ, ಅಗತ್ಯ ವಸ್ತುಗಳ ಬೆಲೆ

Webdunia
ಸೋಮವಾರ, 3 ಅಕ್ಟೋಬರ್ 2022 (06:33 IST)
ಬೆಂಗಳೂರು : ದಸರಾ ಮತ್ತು ಆಯುಧಪೂಜೆ ಹಿನ್ನೆಲೆ ನಗರದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಹಬ್ಬದ ಹಿನ್ನೆಲೆ ನಾಳೆ ನಾಡಿದ್ದು ಇನ್ನಷ್ಟು ದರ ಏರಿಕೆ ಸಾಧ್ಯತೆ ಇದ್ದು, ಇಂದೇ ಜನ ಖರೀದಿಗೆ ಮುಂದಾಗಿದ್ದಾರೆ.

ಹಬ್ಬದ ದಿನಗಳು ಹತ್ತಿರ ಬಂದರೆ ಸಾಕು ಜನಸಾಮಾನ್ಯರ ಜೇಬಿಗೆ ಹೊರೆ ಬೀಳುವುದು ಸಾಮಾನ್ಯ. ಕಾರಣ ಅಗತ್ಯ ವಸ್ತುಗಳ ಖರೀದಿ ಹೆಚ್ಚಾಗುವ ಕಾರಣ ಇತರೆ ದಿನಗಳಿಗೆ ಹೋಲಿಕೆ ಮಾಡಿದರೆ ಹಬ್ಬದ ದಿನಗಳಲ್ಲಿ ಬೆಲೆ ಹೆಚ್ಚಾಗುತ್ತಲೇ ಇರುತ್ತದೆ.
ಅದರಂತೆ ಈ ಬಾರಿಯ ಆಯುಧಪೂಜೆ ದಸರಾಗೂ ದರ ಏರಿಕೆಯಾಗಿದ್ದು, ಹಬ್ಬಕ್ಕೆ ಎರಡು ದಿನ ಮುನ್ನವೆ ಖರೀದಿ ಕೂಡ ಜೋರಾಗಿದೆ. 

ಈ ಬಾರಿ ಆಯುಧಪೂಜೆಗೆ ಕೇವಲ ಎರಡು ದಿನ ಮಾತ್ರ ಬಾಕಿ ಇದೆ. ಸಾಮಾನ್ಯವಾಗಿ ಆಯುಧಪೂಜೆ ಸಂದರ್ಭದಲ್ಲಿ ವಾಹನಗಳು, ಯಂತ್ರಗಳಿಗೆ ಹೂವಿನ ಅಲಂಕಾರದ ಜೊತೆಗೆ, ಪೂಜೆ ಪುನಾಸ್ಕಾರಗಳು ಜೋರಾಗಿಯೇ ಮಾಡುವುದರಿಂದ ಹೂ ಸೇರಿದಂತೆ ಕೆಲ ಅಗತ್ಯ ವಸ್ತುಗಳ ದರ ದುಪ್ಪಟ್ಟಾಗಿದೆ.

ಹೂವಿನ ಬೆಲೆ ಕೆಜಿಗೆ ಎಷ್ಟು?

ಮಲ್ಲಿಗೆ ಹೂ – 1000 ಸಾವಿರ ರೂ.
ಸೇವಂತಿಗೆ – 300-500  ರೂ.
ಚೆಂಡು ಹೂ – 150 ರೂ .
ಕನಕಾಂಬರ – 3 ಸಾವಿರ
ಸುಗಂಧರಾಜ – 400 ರೂ.
ಕಾಕಡ – 700-800 ರೂ.

ಕೇವಲ ಹೂ ಮಾತ್ರ ಅಲ್ಲ. ಈ ಹಬ್ಬಕ್ಕೆ ಬೇಕಾದ ಮತ್ತೊಂದು ಅಗತ್ಯ ವಸ್ತು ಅಂದರೆ ಕುಂಬಳಕಾಯಿ ಹಾಗೂ ಬಾಳೆ ಕಂಬ. ಇವುಗಳ ಬೆಲೆ ಕೂಡ ಡಬಲ್ ಆಗಿದೆ. ತಮಿಳುನಾಡು, ಆಂಧ್ರದಿಂದ ನಗರಕ್ಕೆ ಆಗಮಿಸಿರುವ ಕುಂಬಳಕಾಯಿ ಕೆ.ಜಿಗೆ 35 ರಿಂದ 40 ರೂ. ಗೆ ಏರಿಕೆ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments