Webdunia - Bharat's app for daily news and videos

Install App

ಶೃಂಗೇರಿ ಇಲ್ಲಾಂದ್ರೆ ತೆರೇದಾಳನಿಂದ ಚುನಾವಣೆಗೆ ಸ್ಪರ್ಧೆ: ಪ್ರಮೋದ್ ಮುತಾಲಿಕ್

Webdunia
ಮಂಗಳವಾರ, 3 ಏಪ್ರಿಲ್ 2018 (18:07 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರ ಇಲ್ಲಾಂದ್ರೆ ತೆರೇದಾಳನಿಂದ ಸ್ಪರ್ಧಿಸುವುದಾಗಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಶ್ರೀರಾಮ ಸೇನೆ ಶಿವಸೇನೆಯನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ಈ ಭಾರಿ ಚುನಾವಣೆಯಲ್ಲಿ ಶಿವಸೇನೆ ನೇತೃತ್ವದಲ್ಲಿ 6೦ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದ್ದೇವೆ. ಸಿದ್ದಲಿಂಗ ಸ್ವಾಮೀಜಿ ಜೇವರ್ಗಿ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ. ನಾನು ಶೃಂಗೇರಿ ಅಥವಾ ತೇರದಾಳ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆಈ ಬಗ್ಗೆ ಎರಡು ದಿನಗಳಲ್ಲಿ ಅಂತಿಮ ನಿರ್ಧಾರ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
 
ಹಿಂದೂತ್ವ ನಮ್ಮ ಪ್ರಮುಖ ಅಜಂಡಾ ಬಿಜೆಪಿ ಯದ್ದು ಡೋಂಗಿ ಹಿಂದೂತ್ವ. ಬಿಜೆಪಿ ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಹಿಂದೂತ್ವವನ್ನು ಬಳಸಿಕೊಳ್ಳುತ್ತಿದೆ
 
ನಾವು ಹಿಂದುತ್ವಕ್ಕಾಗಿ ರಾಜಕೀಯ ಮಾಡುತ್ತೇವೆ. ಕೇಂದ್ರದ ಬಿಜೆಪಿ ಸರ್ಕಾರ ಇದ್ರು. ಭಾರತ ಗೋ ಮಾಂಸ ಸಾಗಾಟದಲ್ಲಿ ನಂಬರ್ 1 ಆಗಿದೆ ಅನಂತ್ ಕುಮಾರ್ ಗೋ ಮಾಂಸ ನಿಷೇಧದ ಬಗ್ಗೆ ಡೋಂಗಿ ಮಾತನಾಡುತ್ತಾರೆ ಎಂದು ಲೇವಡಿ ಮಾಡಿದರು.
 
ಗೋ ಮಾಂಸ ನಿಷೇಧ ಎನ್ನುವುದು ಬಿಜೆಪಿಯ ಬೂಟಾಟಿಕೆ. ದತ್ತಪೀಠವೂ ಗೋ ಮಾಂಸ ನಿಷೇಧದ ಹಾಗೆ ದತ್ತಪೀಠವನ್ನು ಸಹ ಬಿಜೆಪಿ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ. ಸಿ ಟಿ ರವಿ ಇದೇ ದತ್ತಪೀಠ ವಿವಾದದಿಂದ ಮೂರು ಬಾರಿ ಶಾಸಕರಾಗಿದ್ದಾರೆ. ದತ್ತಪೀಠ ಗುಹೆ ಕಟ್ಟಲಾಗದ ಸಿ ಟಿ ರವಿ 8 ಕೋಟಿ ಖರ್ಚು ಮಾಡಿ ತಮ್ಮ ಮನೆ ಕಟ್ಟಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.
 
ಮಾಲೀಕಯ್ಯ ಗುತ್ತೇದಾರ್ ಬಿಜೆಪಿ ಸೇರ್ಪಡೆಗೆ ಮುತಾಲಿಕ್ ಕಿಡಿ ನೂರಾರು ಮಸೀದಿಯನ್ನು ಕಟ್ಟಿದವನನ್ನು ಬಿಜೆಪಿಗೆ ಕರೆತಂದದ್ದು ಯಾಕೆ ಮಾಲೀಕಯ್ಯ ಗುತ್ತೇದಾರ್ ರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಂಡು ಯಾರಿಗೆ ಪಾಠ ಹೇಳಲು ಹೊರಟಿದ್ದೀರಿ ಎಂದು  ಪ್ರಮೋದ್ ಮುತಾಲಿಕ್ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವ ಚಾನೆಲ್ ಗಳು ನನ್ನ ಬಗ್ಗೆ ಸುಳ್ಳು ಸುದ್ದಿ ಹಾಕಿದ್ರೂ ಕೇಳೋನಲ್ಲ ನಾನು: ಸಿದ್ದರಾಮಯ್ಯ

ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾದ ಎನ್ ರಾಮಚಂದರ್ ರಾವ್ ಹಿನ್ನೆಲೆ ಹೀಗಿದೆ

ಸರಣಿ ಹೃದಯಾಘಾತಕ್ಕೆ ಕೊವಿಡ್ ಲಸಿಕೆ ಕಾರಣವಾ: ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ

ಕೇಂದ್ರ ಸರ್ಕಾರದಿಂದಾಗಿ ದಿನಬಳಕೆ ವಸ್ತುಗಳಿಗೂ ಇನ್ನು ಝಡ್ ಪ್ಲಸ್ ಭದ್ರತೆ ಕೊಡಬೇಕು

ಕಾಂಗ್ರೆಸ್ ಅಧಿಕಾರ, ಮಾನಸಿಕ ಅಸ್ವಸ್ಥರಿಗೂ ಏನಾದರೂ ಸಂಬಂಧ ಇದೆಯೇ?: ಸಿ.ಟಿ.ರವಿ

ಮುಂದಿನ ಸುದ್ದಿ
Show comments