Webdunia - Bharat's app for daily news and videos

Install App

ರಾಜ್ಯದಲ್ಲಿ ನಾಳೆಯಿಂದ SSLC ಪರೀಕ್ಷೆ

Webdunia
ಭಾನುವಾರ, 18 ಜುಲೈ 2021 (15:05 IST)
ಬೆಂಗಳೂರು (ಜು.18):  ನಾಳೆಯಿಂದ ರಾಜ್ಯದಲ್ಲಿ 2020-21 ನೇ ಸಾಲಿನ SSLC ಪರೀಕ್ಷೆ ಪ್ರಾರಂಭವಾಗಲಿದ್ದು, ಎರಡು ದಿನಗಳ ಕಾಲ ಪರೀಕ್ಷೆ ನಡೆಯಲಿದೆ. ಜುಲೈ 19 ಮತ್ತು 22 ರಂದು ಪರೀಕ್ಷೆ ನಡೆಯಲಿದೆ. 
ಪರೀಕ್ಷಾ ಸಿದ್ಧತೆ ಪೂರ್ಣಗೊಳಿಸಿರುವ ಶಿಕ್ಷಣ ಇಲಾಖೆ ಕೊರೋನಾ ಮಾರ್ಗಸೂಚಿಯೊಂದಿಗೆ ಪರೀಕ್ಷೆ ನಡೆಸುತ್ತಿದೆ.

ಪರೀಕ್ಷಾ ಕೇಂದ್ರಗಳಲ್ಲಿ ವಿಶೇಷ ಕೊಠಡಿ ತೆರೆಯಲಾಗಿದ್ದು,

•             ನಾಳೆಯಿಂದ ರಾಜ್ಯದಲ್ಲಿ 2020-21 ನೇ ಸಾಲಿನ SSLC  ಪರೀಕ್ಷೆ ಪ್ರಾರಂಭ
•             2 ದಿನಗಳ ಕಾಲ ಜುಲೈ 19 ಮತ್ತು 22 ರಂದು ಪರೀಕ್ಷೆ ನಡೆಯಲಿದೆ. 

 
ಪ್ರತಿ ತಾಲೂಕಿಗೊಂದು ತುರ್ತು ಚಿಕಿತ್ಸಾ ವಾಹನ ವ್ಯವಸ್ಥೆ ಮಾಡಲಾಗಿದೆ.
ಕೋವಿಡ್ ಕೇರ್ ಸೆಂಟರ್ ಸ್ಥಾಪನೆ ಮಾಡಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿ ಹಾಗೂ ಸಿಬ್ಬಂದಿಗಳು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು.  ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಟೆಸ್ಟ್ ಕಡ್ಡಾಯ ಮಾಡಲಾಗಿದೆ.
ಎಸ್ಸೆಸ್ಸೆಲ್ಸಿ ಫಲಿತಾಂಶದ ಬಗ್ಗೆ ಸಚಿವ ಸುರೇಶ್ ಕುಮಾರ್ ಹೇಳಿದ್ದಿಷ್ಟು
ಈ ಭಾರಿ ಒಟ್ಟು 8, 76, 581 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬಾಲಕರು 4,72,643, ಬಾಲಕಿಯರು 4,3,938,  7,83,955 ಫ್ರೆಶರ್ಸ್ ಪರೀಕ್ಷೆ ಬರೆಯಲಿದ್ದಾರೆ.
ಪುನಾವರ್ತಿತ ವಿದ್ಯಾರ್ಥಿಗಳು 977 ಇದ್ದು, ಖಾಸಗಿ ವಿದ್ಯಾರ್ಥಿಗಳು 21,817 ಇದ್ದಾರೆ.  ಖಾಸಗಿ ಪುನರಾವರ್ತಿತ ವಿದ್ಯಾರ್ಥಿಗಳು 9,419 ಇದ್ದಾರೆ. ರಾಜ್ಯದಲ್ಲಿ ಒಟ್ಟು 4,884 ಪರೀಕ್ಷಾ ಕೇಂದ್ರಗಳ ಸ್ಥಾಪನೆ ಮಾಡಲಾಗಿದೆ.
ಒಟ್ಟು 7366 ಪರೀಕ್ಷಾ ಕೊಠಡಿಗಳು ಇದ್ದು,  ಪರೀಕ್ಷಾ ಕೇಂದ್ರದ ಸುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಎರಡು ದಿನಗಳ ಕಾಲ ನಡೆಯಲಿದ್ದು, SSLC ಈ ಭಾರಿ ಪರೀಕ್ಷೆ ವಿಧಾನದಲ್ಲಿ ಬದಲಾವಣೆ ಮಾಡಲಾಗಿದೆ.
KPSC ಮಾದರಿಯಲ್ಲಿ SSLC ಪರೀಕ್ಷೆ ನಡೆಯಲಿದ್ದು,  40 ಅಂಕಗಳಿಗೆ ನಡೆಯಲಿದೆ.  ಮೂರು ಗಂಟೆ ಅವಧಿಯಲ್ಲಿ ಮೂರು ವಿಷಯಗಳಿಗೆ ಪರೀಕ್ಷೆ ನಡೆಯಲಿದೆ.
ಒಂದು ಕೊಠಡಿಯಲ್ಲಿ 10 ರಿಂದ 12 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶವಿದ್ದು, ಇನ್ನು 1 ಲಕ್ಷದ 30 ಸಾವಿರ ಸಿಬ್ಬಂದಿಗಳನ್ನ ಪರೀಕ್ಷಾ ಕಾರ್ಯಕ್ಕೆ ನಿಯೋಜನೆ ಮಾಡಲಾಗಿದೆ.
ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಬೆಳಿಗ್ಗೆ 9 ಗಂಟೆಗೆ ಹಾಜರಾಗುವುದು ಕಡ್ಡಾಯವಾಗಿದ್ದು, ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ರವರೆಗೆ ಪರೀಕ್ಷೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌

ಮೈಸೂರಿಗೆ ಆಗಮಿಸುವ ಮೋದಿಗೆ ನೀಡಲು ಶಿಲ್ಪಿ ಅರುಣ್ ಯೋಗಿರಾಜ್‌ ಕೆತ್ತನೆಯಲ್ಲಿ ವಿವೇಕಾನಂದರ ಮೂರ್ತಿ

ಕಾವೇರಿ ನೀರು ಹಂಚಿಕೆ ವಿಚಾರ: ಮಹತ್ವದ ಸಭೆ ಕರೆದ ಸಿಎಂ ಡಿಕೆ ಶಿವಕುಮಾರ್

ಅಮಿತ್ ಶಾರನ್ನು ಹೊರಗೆ ಜನರ ಮುಂದೆ ಎಳೆದು ತಂದು ನಿಲ್ಲಿಸ್ತೀವಿ: ಮಲ್ಲಿಕಾರ್ಜುನ ಖರ್ಗೆ ವಿವಾದ Video

ಕಾವೇರಿ ನೀರು ವಿವಾದ: CWRC ಆದೇಶ ಎತ್ತಿಹಿಡಿದ ಪ್ರಾಧಿಕಾರ; ಕರ್ನಾಟಕಕ್ಕೆ ಹಿನ್ನಡೆ

ಮುಂದಿನ ಸುದ್ದಿ
Show comments