Webdunia - Bharat's app for daily news and videos

Install App

ಮಾದಪ್ಪನ ಬೃಹತ್ ಪ್ರತಿಮೆ ನಿರ್ಮಾಣ..! ಇದರ ಎತ್ತರ ಎಷ್ಟು ಗೊತ್ತ?

Webdunia
ಬುಧವಾರ, 3 ನವೆಂಬರ್ 2021 (16:26 IST)
ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದ ದೀಪದ ಗಿರಿ ಒಡ್ಡುವಿನಲ್ಲಿ ನಿರ್ಮಿಸುತ್ತಿರುವ ಬಹು ನಿರೀಕ್ಷಿತ ಮಾದಪ್ಪನ 108 ಅಡಿಯ ಬೃಹತ್ ಪ್ರತಿಮೆ ಕಾಮಗಾರಿ ಭರದಿಂದ ಸಾಗುತ್ತಿದೆ.
20 ಎಕರೆ ಪ್ರದೇಶದಲ್ಲಿ ಮಹದೇಶ್ವರರು ಹುಲಿ ಮೇಲೆ ಕುಳಿತ ಭಂಗಿಯ ಪ್ರತಿಮೆ ನಿರ್ಮಾಣಗೊಳ್ಳಲಿದೆ. ಪ್ರತಿಮೆಯ ಅಡಿಪಾಯವಾಗಿ 20 ಅಡಿಯ ಪೀಠವು ಗುಹೆ ಮಾದರಿಯಲ್ಲಿರಲಿದೆ. ಇದರ ನಿರ್ಮಾಣ ಈಗ ಸಾಗಿದೆ.
ಗುಹೆ ಒಳಗಡೆ ಮಾದಪ್ಪನ ಲೀಲೆಗಳನ್ನು ಸಾರುವ ಮಾಹಿತಿ ಇರಲಿದೆ. ಗುಹೆ (ಪೀಠ)ಯ ಮೇಲೆ 80 ಅಡಿಯ ಮಹಾದೇಶ್ವರರ ಪ್ರತಿಮೆ ನಿರ್ಮಾಣಗೊಳ್ಳಲಿದೆ. ಈ ಪ್ರತಿಮೆಯನ್ನು ಕಬ್ಬಿಣ ಹಾಗೂ ಸಿಮೆಂಟ್ ಬಳಸಿ ನಿರ್ಮಿಸಲಾಗುತ್ತದೆ. ಕೊನೆಯಲ್ಲಿ ಜಿಂಕ್ ಕೋಟಿಂಗ್ ಮಾಡಲಾಗುವುದು ಎಂದು ಪ್ರಾಧಿಕಾರದ ಕಾರ್ಯದರ್ಶಿ ಜಯ ವಿಭವ ಸ್ವಾಮಿ ತಿಳಿಸಿದ್ದಾರೆ.
ಈಗಾಗಲೇ ಗುಹೆ ಮಾದರಿಯಲ್ಲಿ ತಳ ಭಾಗ ನಿರ್ಮಿಸುವ ಕಾಮಗಾರಿ
2016ರ ಸೆಪ್ಟೆಂಬರ್ ತಿಂಗಳಲ್ಲಿ ಬೆಟ್ಟಕ್ಕೆ ಭೇಟಿ ನೀಡಿದ್ದ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 100 ಅಡಿ ಎತ್ತರದ ಮಹಾದೇಶ್ವರರ ವಿಗ್ರಹ ನಿರ್ಮಾಣ ಯೋಜನೆಯನ್ನು ಘೋಷಿಸಿದ್ದರು. ಈ ಯೋಜನೆಗೆ ಬೇಕಾದ ಭೂ ಸ್ವಾಧೀನ ಸಮಸ್ಯೆಯಿಂದ 3 ವರ್ಷ ತಡವಾಗಿ ಪ್ರಾರಂಭ ವಾಗಿದೆ.
'ಪ್ರತಿಮೆ ಕೆಳಗಿನ ಎರಡು ಮಹಡಿಗಳಿಗೆ ಹೊರ ಹೊದಿಕೆ ಕಾರ್ಯ ಅತ್ಯಂತ ಕುಶಲತೆಯಿಂದ ಕೂಡಿದ್ದು, ಪಿಎಸ್ಎಪಿ ಆರ್ಕಿಟೆಕ್ಟ್ನ ಮಾಲತೇಶ್ ಪಾಟೀಲ್ ನಿರ್ವಹಿಸುತ್ತಿದ್ದಾರೆ. 2017ರಂತೆ ಇರುವ ದರಕ್ಕೆ 20 ಕೋಟಿಗೆ ಟರ್ನ್ ಕೀ ಪ್ರಾಜೆಕ್ಟ್ ಆಗಿ ನೀಡಲಾಗಿತ್ತು. ಸದ್ಯ ಈ ಯೋಜನೆಗೆ ಹೆಚ್ಚುವರಿ ಮೊತ್ತ ನೀಡಲು ಅವಕಾಶ ಇಲ್ಲದಿದ್ದರೂ ಹಾಗೂ ಪ್ರಸ್ತುತ ಮಾರುಕಟ್ಟೆಯಲ್ಲಿ ಕಚ್ಚಾ ವಸ್ತುಗಳ ಬೆಲೆ ಏರಿಕೆಯಾಗಿರುವ ನಡುವೆ ಮಾಲತೇಶ್ ಅವರು ಕಾಮಗಾರಿಯನ್ನು ಅಚ್ಚುಕಟ್ಟಾಗಿ ಮಾಡುತ್ತಿದ್ದಾರೆ' ಎಂದು ಜಯ ವಿಭವ ಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಾಮಗಾರಿ ವಿವರ
ಅಂದಾಜು ವೆಚ್ಚ : 2390.00 ಲಕ್ಷ ರೂ.
ಟೆಂಡರ್ ಕರಾರು ಮೊತ್ತ : 2346.70 ಲಕ್ಷ ರೂ.
ಇದುವರೆವಿಗಿನ ಖರ್ಚು :1544.86 ಲಕ್ಷ ರೂ.
ನಿರ್ವಹಿಸಬೇಕಾಗಿರುವ ಮೊತ್ತ : 801.84 ಲಕ್ಷ ರೂ.
'ಹುಲಿಯ ಮೇಲೆ ಕುಳಿತ ಅಂದವಾದ ಪ್ರತಿಮೆ ನಿರ್ಮಾಣಗೊಳ್ಳುತ್ತಿದೆ. ಇದನ್ನು ನೋಡಲು ಎಲ್ಲ ಭಕ್ತಾದಿಗಳಂತೆ ನಾವೂ ಸಹ ಕಾತುರರಾಗಿದ್ದೇವೆ ಎಂದರೆ ಅತಿಶಯೋಕ್ತಿಯೇನಲ್ಲ' ಎಂದು ಶ್ರೀಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯ ವಿಭವ ಸ್ವಾಮಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments