Webdunia - Bharat's app for daily news and videos

Install App

ಕ್ರಿಮಿನಲ್ ಅಭ್ಯರ್ಥಿ ಪಟ್ಟಿ ಬಹಿರಂಗಪಡಿಸದ ಪಕ್ಷಕ್ಕೆ ಸುಪ್ರೀಂ ಕೋರ್ಟ್ ದಂಡ!

Webdunia
ಬುಧವಾರ, 11 ಆಗಸ್ಟ್ 2021 (07:19 IST)
ನವದೆಹಲಿ(ಆ.11): ಭಾರತದಲ್ಲಿ ಕ್ರಿಮಿನಲ್ ಹಿನ್ನಲೆ ಹೊಂದಿದ ಅಥವಾ ಜೈಲಿನಿಂದಲೇ ಚುನಾವಣೆಗೆ ಸ್ಪರ್ಧಿಸುವ ಅವಕಾಶವಿದೆ. ಈ ನಿಯಮಕ್ಕೆ ದೇಶದಲ್ಲಿ ಭಾರಿ ವಿರೋಧವಿದೆ. ರಾಜಕೀಯವನ್ನು ಕ್ರಿಮಿನಲ್ ಹಿನ್ನಲೆ ಹೊಂದಿದವರಿಗೆ ಮುಕ್ತಗೊಳಿಸಲು ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆ ಇಟ್ಟಿದೆ. ಈ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಚುನಾವಣೆಗೂ ಮೊದಲು ಪಕ್ಷಗಳು ತಮ್ಮ ಅಭ್ಯರ್ಥಿಗಳ ಸಂಪೂರ್ಣ
ವಿವರವನ್ನುಸಾರ್ವಜನಿಕಗೊಳಿಸಬೇಕು. ಇದರಲ್ಲಿ ಕ್ರಿಮಿನಲ್ ಹಿನ್ನಲೆ ಹೊಂದಿದ್ದರೆ ಅಂಥವರ ವಿವರವನ್ನೂ ಬಹಿರಂಗಗೊಳಿಸಬೇಕು ಎಂದು  ಸುಪ್ರೀ ಕೋರ್ಟ್ ಹೇಳಿತ್ತು. ಆದರೆ ಕಾಂಗ್ರೆಸ್, ಬಿಜೆಪಿ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಈ ನಿಯಮ ಉಲ್ಲಂಘಿಸಿದೆ. ಹೀಗಾಗಿ ಹಲವು ಪಕ್ಷಗಳಿಗೆ ಸುಪ್ರೀಂ ಕೋರ್ಟ್ ದಂಡ ವಿಧಿಸಿದೆ.
2020ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಹುತೇಕ ಪಕ್ಷಗಳು ಸುಪ್ರೀಂ ಆದೇಶವನ್ನು ನಿರ್ಲಕ್ಷಿಸಿತ್ತು. ಸಿಪಿಎಂ, ಎನ್ಸಿಪಿ ಪಕ್ಷಕ್ಕೆ ತಲಾ 5 ಲಕ್ಷ ರೂಪಾಯಿ ದಂಡ ವಿಧಿಸಿದೆ. ಇನ್ನು ಕಾಂಗ್ರೆಸ್, ಬಿಜೆಪಿ, ಕಮ್ಯೂನಿಸ್ಟ್, ಜೆಡಿಯು, ಆರ್ಜೆಡಿ ಹಾಗೂ ಎಲ್ಜೆಪಿ ಪಕ್ಷಗಳಿಗೆ ತಲಾ 1 ಲಕ್ಷ ರೂಪಾಯಿ ದಂಡ ವಿಧಿಸಿದೆ.
ದಂಡ ಮಾತ್ರವಲ್ಲ ಇದರ ಜೊತೆಗೆ ರಾಜಕೀಯ ಪಕ್ಷಗಳಿಗೆ ಸುಪ್ರೀಂ ಕೋರ್ಟ್ ಖಡಕ್ ಸೂಚನೆ ನೀಡಿದೆ.  ಪ್ರತಿ ಬಾರಿ ರಾಜಕೀಯ ಪಕ್ಷಗಳು ಕ್ರಿಮಿನಲ್ ಹಿನ್ನಲೆ ಹೊಂದಿದ ಅಭ್ಯರ್ಥಿಗಳ ಮಾಹಿತಿಯನ್ನು ಬಹಿರಂಗ ಪಡಿಸುತ್ತಿಲ್ಲ. ಆದೇಶಕ್ಕೂ ಗೌರವ ನೀಡುತ್ತಿಲ್ಲ. ಹೀಗಾಗಿ 2020ರ ಫೆಬ್ರವರಿಯಲ್ಲಿ ನೀಡಿದ ಆದೇಶದ ಮೇಲೆ ಕೆಲ ಮಾರ್ಪಾಡು ಮಾಡಿ ಹೊಸ ತೀರ್ಪು ನೀಡಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments