Webdunia - Bharat's app for daily news and videos

Install App

ನೀವೂ ಬಹುಮತ ಇದೆ ಅಂತೀರಿ, ಅವರೂ ಅಂತಾರೆ! ಇದು ಹೇಗೆ ಸಾಧ್ಯ? ಬಿಜೆಪಿಗೆ ಸುಪ್ರೀಂಕೋರ್ಟ್ ಪ್ರಶ್ನೆ

Webdunia
ಶುಕ್ರವಾರ, 18 ಮೇ 2018 (11:02 IST)
ನವದೆಹಲಿ: ಕರ್ನಾಟಕ ರಾಜ್ಯ ಸರ್ಕಾರ ರಚನೆ ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ರಿಟ್ ಅರ್ಜಿ ಸಲ್ಲಿಸಿರುವ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಆರಂಭವಾಗಿದೆ.

ಬಿಜೆಪಿ ಪರ ವಕೀಲ ಮುಕುಲ್ ರೋಹ್ಟಗಿ ವಾದ ಮಂಡಿಸಿದರು. ಈ ವೇಳೆ ನಮಗೆ ಬಹುಮತವಿದೆ. ಆದರೆ ಬೆಂಬಲ ನೀಡುತ್ತಿರುವ ಶಾಸಕರಿಗೆ ಬೆದರಿಕೆ ಇರುವುದರಿಂದ ಅವರ ಹೆಸರನ್ನು ಬಹಿರಂಗಪಡಿಸುವುದಿಲ್ಲ ಎಂದಿದ್ದಾರೆ.

ಇದಕ್ಕೆ ನ್ಯಾಯಾಧೀಶರು ಕಾಂಗ್ರೆಸ್ ಕೂಡಾ ನಮಗೆ ಬಹುಮತ ಇದೆ ಅಂತಿದೆ. ನೀವೂ ಅಂತಿದ್ದೀರಿ. ಇದು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ. ಕೋರ್ಟ್ ಗೆ ಬಿಜೆಪಿ ಪರವಾಗಿ ವಕೀಲ ರೋಹ್ಟಗಿ ಶಾಸಕರ ಹೆಸರೇ ಇಲ್ಲದ ಪತ್ರ ಸಲ್ಲಿಸಿ ಶಾಸಕರ ಹೆಸರು ಬಹಿರಂಗಪಡಿಸುವ ಅಗತ್ಯವಿಲ್ಲ ಎಂದು ಸಮಜಾಯಿಷಿ ಕೊಟ್ಟಿದ್ದಾರೆ.

ಅತ್ತ ಕಾಂಗ್ರೆಸ್ ಕೂಡಾ ತನ್ನ ಶಾಸಕರ ಪಟ್ಟಿಯನ್ನು ಕೋರ್ಟ್ ಗೆ ಸಲ್ಲಿಸಿದ್ದು, ಅದರಲ್ಲಿ ಶಾಸಕ ಆನಂದ್ ಸಿಂಗ್ ಸಹಿ ಇರಲಿಲ್ಲ. ಈ ನಡುವೆ ಅತೀ ದೊಡ್ಡ ಪಕ್ಷ ಹೇಗೆ ಸ್ಥಿರ ಸರ್ಕಾರ ನೀಡುತ್ತೆ ಎಂಬ ನಿರ್ಧಾರಕ್ಕೆ ಬಂದರು ಎಂದು ಬಿಜೆಪಿ ಪರ ವಕೀಲರನ್ನು ಪ್ರಶ್ನಿಸಿದ್ದಾರೆ. ಅದಕ್ಕೆ ವಾದ ಮಂಡಿಸಿದ ರೋಹ್ಟಗಿ ಇದು ರಾಜ್ಯಪಾಲರ ಪರಮಾಧಿಕಾರ ಎಂದಿದ್ದಾರೆ. ಅಷ್ಟೇ ಅಲ್ಲದೆ, ಕಾಂಗ್ರೆಸ್-ಜೆಡಿಎಸ್ ಶಾಸಕರು ಲಿಖಿತ ಬೆಂಬಲ ನೀಡಿಲ್ಲ ಎಂದೂ ಅವರು ವಾದಿಸಿದ್ದಾರೆ.  ಹೀಗಾಗಿ ಇದು ಖಂಡಿತವಾಗಿ ನಂಬರ್ ಗೇಮ್ ಎಂಬ ತೀರ್ಮಾನಕ್ಕೆ ನ್ಯಾಯಾಧೀಶರು ಬಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments