ತೂಗು ಸೇತುವೆ ಕುಸಿತ! ನೂರಾರು ಮಂದಿ ನೀರುಪಾಲು

Webdunia
ಸೋಮವಾರ, 31 ಅಕ್ಟೋಬರ್ 2022 (06:40 IST)
ಗಾಂಧೀನಗರ : ಈಚೆಗಷ್ಟೇ ನವೀಕರಣಗೊಂಡು ಉದ್ಘಾಟನೆಯಾಗಿದ್ದ ಗುಜರಾತ್ನ ತೂಗು ಸೇತುವೆ ಕುಸಿತದಿಂದಾಗಿ ಈವರೆಗೆ 60 ಮಂದಿ ಸಾವನ್ನಪ್ಪಿದ್ದು, ನೂರಾರು ಅಪಾಯದಲ್ಲಿ ಸಿಲುಕಿದ್ದಾರೆ.
 
ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಕುಸಿತದ ವೇಳೆ ಸೇತುವೆ ಮೇಲೆ 500ಕ್ಕೂ ಹೆಚ್ಚು ಮಂದಿ ಇದ್ದರು. ಕುಸಿತದಿಂದಾಗಿ ಇನ್ನೂ 100ಕ್ಕೂ ಹೆಚ್ಚು ಮಂದಿ ನೀರುಪಾಲಾಗಿದ್ದಾರೆ. ಅಪಾಯದಲ್ಲಿದ್ದವರ ರಕ್ಷಣೆ ಕಾರ್ಯಾಚರಣೆ ಭರದಿಂದ ಸಾಗಿದೆ.

ಇಂದು ಗುಜರಾತ್ನಲ್ಲಿದ್ದ ಪ್ರಧಾನಿ ನರೇಂದ್ರ ಅವರು ತುರ್ತು ರಕ್ಷಣಾ ಕಾರ್ಯಾಚರಣೆಗೆ ಆದೇಶ ನೀಡಿದ್ದಾರೆ. ಗಾಯಾಳುಗಳನ್ನು ರಕ್ಷಿಸುವ ಪ್ರಯತ್ನದಲ್ಲಿ ಹಲವು ಸ್ಥಳೀಯರು ಸಹ ಕೈಜೋಡಿಸಿದ್ದಾರೆ.

ಪ್ರಧಾನಿಯವರು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರೊಂದಿಗೆ ಮಾತನಾಡಿದ್ದು, ಪರಿಸ್ಥಿತಿಯನ್ನು ಅವಲೋಕಿಸುವಂತೆ ಹೇಳಿದರು. ಅಪಘಾತದ ಸುದ್ದಿ ಬರುತ್ತಿದ್ದಂತೆ ಗುಜರಾತ್ ಗೃಹ ಸಚಿವ ಹರ್ಷ ಸಂಘವಿ ಮೊರ್ಬಿಗೆ ಧಾವಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತೇಜಸ್ವಿ ಸಿಎಂ ಆಗಲು, ರಾಹುಲ್‌ ಪ್ರಧಾನಿಯಾಗಲು ಮತದಾರರಿಗೆ ವಿಶೇಷ ಮನವಿಯಿಟ್ಟ ಡಿಕೆ ಶಿವಕುಮಾರ್

ಚಿಕನ್ ಫ್ರೈಗಾಗಿ ಯುದ್ಧಭೂಮಿಯಂತಾದ ಮದುವೆ ಮಂಟಪ, ಅಂಥಾದೇನಾಯಿತು ಗೊತ್ತಾ

ಮೋದಿ, ನಿತೇಶ್ ಜೋಡಿ ಬಿಹಾರವನ್ನು ಜಂಗಲ್ ರಾಜ್‌ನಿಂದ ಮುಕ್ತಗೊಳಿಸಿದರು: ಅಮಿತ್ ಶಾ

ಶಬರಿಮಲೆ ಯಾತ್ರಾರ್ಥಿಗಳ ಯೋಗಕ್ಷೇಮಕ್ಕೆ ವಿಶೇಷ ಆಸ್ಪತ್ರೆ, ಎಷ್ಟೋ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಗೊತ್ತಾ

ಮುಂದಿನ ಸುದ್ದಿ
Show comments